ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವ್ಯಾಕ್ಸಿನ್‌ಚಾಲೆಂಜ್‌: ಕೇರಳ ಸಿ.ಎಂ. ನಿಧಿಗೆ ₹ 22 ಲಕ್ಷ ಸಂದಾಯ

Last Updated 22 ಏಪ್ರಿಲ್ 2021, 14:58 IST
ಅಕ್ಷರ ಗಾತ್ರ

ತಿರುವನಂತಪುರ: ರಾಜ್ಯ ಸರ್ಕಾರ ನೀಡುವ ಉಚಿತ ಲಸಿಕೆಯನ್ನು ತೆಗೆದುಕೊಳ್ಳುವವರು ಲಸಿಕೆಯ ದರದ ಮೊತ್ತವನ್ನು ಕೇರಳ ಮುಖ್ಯಮಂತ್ರಿಗಳ ವಿಪತ್ತು ಪರಿಹಾರ ನಿಧಿಗೆ ನೀಡುವಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಆರಂಭವಾಗಿರುವ ಅಭಿಯಾನಕ್ಕೆ ಭಾರಿ ಸ್ಪಂದನೆ ವ್ಯಕ್ತವಾಗಿದೆ.

‘#VaccineChallenge’ ಎಂಬ ಹ್ಯಾಷ್‌ಟ್ಯಾಗ್‌ಗೆ ಜನರಿಂದ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಅಭಿಯಾನ ಆರಂಭಗೊಂಡ 24 ಗಂಟೆಗಳಲ್ಲಿ ಮುಖ್ಯಮಂತ್ರಿಗಳ ನಿಧಿಗೆ ₹ 22 ಲಕ್ಷ ದೇಣಿಗೆ ಪಾವತಿಯಾಗಿದೆ.

ಕೇಂದ್ರ ಘೋಷಿಸಿರುವ ಹೊಸ ಲಸಿಕೆ ನೀತಿಯನ್ನು ಪ್ರತಿಭಟಿಸಿ ಹಾಗೂ ರಾಜ್ಯದ ಜನರಿಗೆ ಉಚಿತವಾಗಿ ಲಸಿಕೆ ನೀಡುವುದಾಗಿ ಹೇಳಿರುವ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರಿಗೆ ಬೆಂಬಲ ಸೂಚಿಸಿ ಬುಧವಾರ ಈ ಅಭಿಯಾನವನ್ನು ಆರಂಭಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT