ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಚಿತ ಯಾತ್ರಾ ಯೋಜನೆಗೆ ವೆಲಂಕಣಿ ಚರ್ಚ್‌ ಸೇರ್ಪಡೆ: ಕೇಜ್ರಿವಾಲ್‌

Last Updated 24 ನವೆಂಬರ್ 2021, 11:37 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಹಿರಿಯ ನಾಗರಿಕರು ಧಾರ್ಮಿಕ ಕ್ಷೇತ್ರಗಳಿಗೆ ಉಚಿತ ಯಾತ್ರೆ ಕೈಗೊಳ್ಳುವ ಸಲುವಾಗಿ ದೆಹಲಿ ಸರ್ಕಾರ ರೂಪಿಸಿರುವ ಯೋಜನೆಗೆ ತಮಿಳುನಾಡಿನ ಪ್ರಸಿದ್ಧ ವೆಲಂಕಣಿ ಚರ್ಚ್‌ ಅನ್ನು ಸೇರ್ಪಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಬುಧವಾರ ಹೇಳಿದರು.

‘ಕ್ರೈಸ್ತ ಧರ್ಮದ ಕೆಲವು ಶ್ರದ್ಧಾಕೇಂದ್ರಗಳನ್ನು ಈ ಯೋಜನೆಗೆ ಸೇರ್ಪಡೆ ಮಾಡುವಂತೆ ಕ್ರೈಸ್ತರು ಮಾಡಿದ್ದರು. ಅವರ ಮನವಿ ಮೇರೆಗೆ ವೆಲಂಕಣಿ ಚರ್ಚ್‌ ಅನ್ನು ಯೋಜನೆ ವ್ಯಾಪ್ತಿಗೆ ಸೇರಿಸಲು ತೀರ್ಮಾನಿಸಲಾಗಿದೆ’ ಎಂದು ಅವರು ಆನ್‌ಲೈನ್‌ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಮುಖ್ಯಮಂತ್ರಿ ತೀರ್ಥ ಯಾತ್ರಾ ಯೋಜನೆ’ಗೆ ಡಿಸೆಂಬರ್ 3ರಂದು ಚಾಲನೆ ನೀಡಲಾಗುವುದು. ಈ ಯೋಜನೆಯಡಿ ಹಿರಿಯ ನಾಗರಿಕ ಯಾತ್ರಾರ್ಥಿಗಳು ಅಯೋಧ್ಯೆಗೆ ಪ್ರಯಾಣ ಬೆಳೆಸುವರು ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT