‘ಶ್ರೀಕ್ಷೇತ್ರದ ಪ್ರಸಾದವನ್ನು ಸ್ಪೀಡ್ ಪೋಸ್ಟ್ ಮೂಲಕ ಭಕ್ತರ ಮನೆಗಳಿಗೆ ತಲುಪಿಸುವಂತೆ ಶ್ರೀ ಮಾತಾ ವೈಷ್ಣೋದೇವಿ ದೇಗುಲ ಮಂಡಳಿಯವರು, ಅಂಚೆ ಇಲಾಖೆಯೊಂದಿಗೆ ಒಪ್ಪಂದ ಮಾಡಿಕೊಂಡಿರುವುದಾಗಿ‘ ದೇವಾಲಯ ಮಂಡಳಿಯ ಪ್ರಕಟಣೆ ತಿಳಿಸಿದೆ. ದೇವಾಲಯ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಮೇಶ್ ಕುಮಾರ್ ಮತ್ತು ಪ್ರಧಾನ ಅಂಚೆ ಕಚೇರಿಯ ನಿರ್ದೇಶಕ ಜಿ.ಕೆ. ಗೌರವ್ ಶ್ರೀವಾಸ್ತವ್ ಅವರು ಶನಿವಾರ ಈ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.