‘ಮೈತ್ರಿ ಸರ್ಕಾರ ಮುನ್ನಡೆಸಿಕೊಂಡು ಹೋಗುವ ಸಂದಿಗ್ಧ ಪರಿಸ್ಥಿತಿಯಿದ್ದರೂ ಅವರು ಹಲವಾರು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡರು. ಒಂದೆಡೆ ಅಣ್ವಸ್ತ್ರ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದರೆ, ಮತ್ತೊಂದೆಡೆ ಪಾಕಿಸ್ತಾನಕ್ಕೆ ಸ್ನೇಹ ಹಸ್ತ ಚಾಚಿದರು. ಕಾರ್ಗಿಲ್ ಯುದ್ಧವನ್ನು ಸಮರ್ಥವಾಗಿ ನಿಭಾಯಿಸಿದರು’ ಎಂದು ಸಿನ್ಹಾ ಅವರು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದರು.