ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಾಲ್ವನ್ ಸಂಘರ್ಷಕ್ಕೆ ಒಂದು ವರ್ಷ: ಹುತಾತ್ಮ ಯೋಧರಿಗೆ ಗೌರವ ನಮನ

Last Updated 15 ಜೂನ್ 2021, 11:03 IST
ಅಕ್ಷರ ಗಾತ್ರ

ನವದೆಹಲಿ: ಒಂದು ವರ್ಷದ ಹಿಂದೆ ಲಡಾಖ್‌ನ ಗಾಲ್ವನ್ ಕಣಿವೆಯಲ್ಲಿ ಚೀನಾದೊಂದಿಗಿನ ನಡೆದ ಘರ್ಷಣೆಯಲ್ಲಿ ಹುತಾತ್ಮರಾದ 20 ಭಾರತೀಯ ಯೋಧರಿಗೆ ಸೇನಾಪಡೆ ಮುಖ್ಯಸ್ಥ ಜನರಲ್‌ ಎಂ.ಎಂ. ನರವಣೆ ನೇತೃತ್ವದಲ್ಲಿ ಮಂಗಳವಾರ ಗೌರವ ನಮನ ಸಲ್ಲಿಸಲಾಯಿತು.

ಕಳೆದ ವರ್ಷ ಜೂನ್‌ 15ರಂದು ಗಾಲ್ವನ್‌ ಘರ್ಷಣೆ ನಡೆದಿತ್ತು. ಈ ಸಂದರ್ಭದಲ್ಲಿ ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದ ಸೇನೆಯು,‘ವೀರ ಯೋಧರು ಪ್ರಾದೇಶಿಕ ಸಮಗ್ರತೆಯ ರಕ್ಷಣೆಗಾಗಿಅತ್ಯಂತ ಕಠಿಣ ಪ್ರದೇಶದಲ್ಲಿ ಎದುರಾಳಿಯೊಂದಿಗೆ ಸೆಣಸಾಡಿದ್ದಾರೆ. ದೇಶಕ್ಕಾಗಿ ತಮ್ಮ ಪ್ರಾಣ ತ್ಯಾಗ ಮಾಡಿದ್ದಾರೆ. ಅವರ ಈ ತ್ಯಾಗವನ್ನು ರಾಷ್ಟ್ರ ಸದಾ ಸ್ಮರಿಸಲಿದೆ’ ಎಂದು ಹೇಳಿದೆ.

‘ಗಾಲ್ವನ್‌ ಕಣಿವೆಯಲ್ಲಿ ಹುತಾತ್ಮರಾದ ವೀರ ಹೃದಯಗಳಿಗೆ ಜನರಲ್‌ ಎಂ.ಎಂ ನರವಣೆ ಸೇರಿದಂತೆ ಭಾರತೀಯ ಸೇನೆಯ ಎಲ್ಲಾ ಶ್ರೇಣಿಯ ಅಧಿಕಾರಿಗಳು ಗೌರವ ನಮನ ಸಲ್ಲಿಸಿದ್ದಾರೆ’ ಎಂದು ಸೇನೆ ಟ್ವೀಟ್ ಮಾಡಿದೆ.

ಲೇಹ್‌ ಸೇನಾ ಶಿಬಿರದಲ್ಲೂ ಗಾಲ್ವನ್‌ನ ವೀರ ಯೋಧರಿಗೆ ಗೌರವ ನಮನ ಸಲ್ಲಿಸಲಾಯಿತು.

ಚೀನಾ ಯೋಧರೊಂದಿಗಿನ ಸಂಘರ್ಷದಲ್ಲಿ ಹುತಾತ್ಮರಾದ ಕರ್ನಲ್‌ ಬಿಕುಮಲ್ಲಾ ಸಂತೋಷ್‌ ಬಾಬು ಅವರಿಗೆ ಮರಣೋತ್ತರವಾಗಿ ಸೇನೆಯ ಎರಡನೇ ಅತಿ ಉನ್ನತ ಪ್ರಶಸ್ತಿಯಾದ ಮಹಾವೀರ ಚಕ್ರ ಘೋಷಿಸಲಾಗಿತ್ತು. ಇತರ ನಾಲ್ಕು ಯೋಧರಿಗೂ ವೀರ ಚಕ್ರ ಪ್ರಶಸ್ತಿ ಘೋಷಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT