ಕಳೆದ ವರ್ಷ ಜೂನ್ 15ರಂದು ಗಾಲ್ವನ್ ಘರ್ಷಣೆ ನಡೆದಿತ್ತು. ಈ ಸಂದರ್ಭದಲ್ಲಿ ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದ ಸೇನೆಯು,‘ವೀರ ಯೋಧರು ಪ್ರಾದೇಶಿಕ ಸಮಗ್ರತೆಯ ರಕ್ಷಣೆಗಾಗಿಅತ್ಯಂತ ಕಠಿಣ ಪ್ರದೇಶದಲ್ಲಿ ಎದುರಾಳಿಯೊಂದಿಗೆ ಸೆಣಸಾಡಿದ್ದಾರೆ. ದೇಶಕ್ಕಾಗಿ ತಮ್ಮ ಪ್ರಾಣ ತ್ಯಾಗ ಮಾಡಿದ್ದಾರೆ. ಅವರ ಈ ತ್ಯಾಗವನ್ನು ರಾಷ್ಟ್ರ ಸದಾ ಸ್ಮರಿಸಲಿದೆ’ ಎಂದು ಹೇಳಿದೆ.