<p><strong>ನವದೆಹಲಿ:</strong> ಒಂದು ವರ್ಷದ ಹಿಂದೆ ಲಡಾಖ್ನ ಗಾಲ್ವನ್ ಕಣಿವೆಯಲ್ಲಿ ಚೀನಾದೊಂದಿಗಿನ ನಡೆದ ಘರ್ಷಣೆಯಲ್ಲಿ ಹುತಾತ್ಮರಾದ 20 ಭಾರತೀಯ ಯೋಧರಿಗೆ ಸೇನಾಪಡೆ ಮುಖ್ಯಸ್ಥ ಜನರಲ್ ಎಂ.ಎಂ. ನರವಣೆ ನೇತೃತ್ವದಲ್ಲಿ ಮಂಗಳವಾರ ಗೌರವ ನಮನ ಸಲ್ಲಿಸಲಾಯಿತು.</p>.<p>ಕಳೆದ ವರ್ಷ ಜೂನ್ 15ರಂದು ಗಾಲ್ವನ್ ಘರ್ಷಣೆ ನಡೆದಿತ್ತು. ಈ ಸಂದರ್ಭದಲ್ಲಿ ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದ ಸೇನೆಯು,‘ವೀರ ಯೋಧರು ಪ್ರಾದೇಶಿಕ ಸಮಗ್ರತೆಯ ರಕ್ಷಣೆಗಾಗಿಅತ್ಯಂತ ಕಠಿಣ ಪ್ರದೇಶದಲ್ಲಿ ಎದುರಾಳಿಯೊಂದಿಗೆ ಸೆಣಸಾಡಿದ್ದಾರೆ. ದೇಶಕ್ಕಾಗಿ ತಮ್ಮ ಪ್ರಾಣ ತ್ಯಾಗ ಮಾಡಿದ್ದಾರೆ. ಅವರ ಈ ತ್ಯಾಗವನ್ನು ರಾಷ್ಟ್ರ ಸದಾ ಸ್ಮರಿಸಲಿದೆ’ ಎಂದು ಹೇಳಿದೆ.</p>.<p>‘ಗಾಲ್ವನ್ ಕಣಿವೆಯಲ್ಲಿ ಹುತಾತ್ಮರಾದ ವೀರ ಹೃದಯಗಳಿಗೆ ಜನರಲ್ ಎಂ.ಎಂ ನರವಣೆ ಸೇರಿದಂತೆ ಭಾರತೀಯ ಸೇನೆಯ ಎಲ್ಲಾ ಶ್ರೇಣಿಯ ಅಧಿಕಾರಿಗಳು ಗೌರವ ನಮನ ಸಲ್ಲಿಸಿದ್ದಾರೆ’ ಎಂದು ಸೇನೆ ಟ್ವೀಟ್ ಮಾಡಿದೆ.</p>.<p><strong>ಇದನ್ನೂ ಓದಿ... <a href="https://www.prajavani.net/india-news/galwan-valley-clash-india-china-border-dispute-a-year-after-galwan-clashes-india-better-prepared-to-839061.html" target="_blank">ಚೀನಾ ಗಡಿ ತಂಟೆ: ಗಾಲ್ವನ್ ಕಣಿವೆ ಸಂಘರ್ಷ, ಯೋಧರ ಬಲಿದಾನಕ್ಕೆ ವರ್ಷ</a></strong></p>.<p>ಲೇಹ್ ಸೇನಾ ಶಿಬಿರದಲ್ಲೂ ಗಾಲ್ವನ್ನ ವೀರ ಯೋಧರಿಗೆ ಗೌರವ ನಮನ ಸಲ್ಲಿಸಲಾಯಿತು.</p>.<p>ಚೀನಾ ಯೋಧರೊಂದಿಗಿನ ಸಂಘರ್ಷದಲ್ಲಿ ಹುತಾತ್ಮರಾದ ಕರ್ನಲ್ ಬಿಕುಮಲ್ಲಾ ಸಂತೋಷ್ ಬಾಬು ಅವರಿಗೆ ಮರಣೋತ್ತರವಾಗಿ ಸೇನೆಯ ಎರಡನೇ ಅತಿ ಉನ್ನತ ಪ್ರಶಸ್ತಿಯಾದ ಮಹಾವೀರ ಚಕ್ರ ಘೋಷಿಸಲಾಗಿತ್ತು. ಇತರ ನಾಲ್ಕು ಯೋಧರಿಗೂ ವೀರ ಚಕ್ರ ಪ್ರಶಸ್ತಿ ಘೋಷಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಒಂದು ವರ್ಷದ ಹಿಂದೆ ಲಡಾಖ್ನ ಗಾಲ್ವನ್ ಕಣಿವೆಯಲ್ಲಿ ಚೀನಾದೊಂದಿಗಿನ ನಡೆದ ಘರ್ಷಣೆಯಲ್ಲಿ ಹುತಾತ್ಮರಾದ 20 ಭಾರತೀಯ ಯೋಧರಿಗೆ ಸೇನಾಪಡೆ ಮುಖ್ಯಸ್ಥ ಜನರಲ್ ಎಂ.ಎಂ. ನರವಣೆ ನೇತೃತ್ವದಲ್ಲಿ ಮಂಗಳವಾರ ಗೌರವ ನಮನ ಸಲ್ಲಿಸಲಾಯಿತು.</p>.<p>ಕಳೆದ ವರ್ಷ ಜೂನ್ 15ರಂದು ಗಾಲ್ವನ್ ಘರ್ಷಣೆ ನಡೆದಿತ್ತು. ಈ ಸಂದರ್ಭದಲ್ಲಿ ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದ ಸೇನೆಯು,‘ವೀರ ಯೋಧರು ಪ್ರಾದೇಶಿಕ ಸಮಗ್ರತೆಯ ರಕ್ಷಣೆಗಾಗಿಅತ್ಯಂತ ಕಠಿಣ ಪ್ರದೇಶದಲ್ಲಿ ಎದುರಾಳಿಯೊಂದಿಗೆ ಸೆಣಸಾಡಿದ್ದಾರೆ. ದೇಶಕ್ಕಾಗಿ ತಮ್ಮ ಪ್ರಾಣ ತ್ಯಾಗ ಮಾಡಿದ್ದಾರೆ. ಅವರ ಈ ತ್ಯಾಗವನ್ನು ರಾಷ್ಟ್ರ ಸದಾ ಸ್ಮರಿಸಲಿದೆ’ ಎಂದು ಹೇಳಿದೆ.</p>.<p>‘ಗಾಲ್ವನ್ ಕಣಿವೆಯಲ್ಲಿ ಹುತಾತ್ಮರಾದ ವೀರ ಹೃದಯಗಳಿಗೆ ಜನರಲ್ ಎಂ.ಎಂ ನರವಣೆ ಸೇರಿದಂತೆ ಭಾರತೀಯ ಸೇನೆಯ ಎಲ್ಲಾ ಶ್ರೇಣಿಯ ಅಧಿಕಾರಿಗಳು ಗೌರವ ನಮನ ಸಲ್ಲಿಸಿದ್ದಾರೆ’ ಎಂದು ಸೇನೆ ಟ್ವೀಟ್ ಮಾಡಿದೆ.</p>.<p><strong>ಇದನ್ನೂ ಓದಿ... <a href="https://www.prajavani.net/india-news/galwan-valley-clash-india-china-border-dispute-a-year-after-galwan-clashes-india-better-prepared-to-839061.html" target="_blank">ಚೀನಾ ಗಡಿ ತಂಟೆ: ಗಾಲ್ವನ್ ಕಣಿವೆ ಸಂಘರ್ಷ, ಯೋಧರ ಬಲಿದಾನಕ್ಕೆ ವರ್ಷ</a></strong></p>.<p>ಲೇಹ್ ಸೇನಾ ಶಿಬಿರದಲ್ಲೂ ಗಾಲ್ವನ್ನ ವೀರ ಯೋಧರಿಗೆ ಗೌರವ ನಮನ ಸಲ್ಲಿಸಲಾಯಿತು.</p>.<p>ಚೀನಾ ಯೋಧರೊಂದಿಗಿನ ಸಂಘರ್ಷದಲ್ಲಿ ಹುತಾತ್ಮರಾದ ಕರ್ನಲ್ ಬಿಕುಮಲ್ಲಾ ಸಂತೋಷ್ ಬಾಬು ಅವರಿಗೆ ಮರಣೋತ್ತರವಾಗಿ ಸೇನೆಯ ಎರಡನೇ ಅತಿ ಉನ್ನತ ಪ್ರಶಸ್ತಿಯಾದ ಮಹಾವೀರ ಚಕ್ರ ಘೋಷಿಸಲಾಗಿತ್ತು. ಇತರ ನಾಲ್ಕು ಯೋಧರಿಗೂ ವೀರ ಚಕ್ರ ಪ್ರಶಸ್ತಿ ಘೋಷಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>