ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಮಾಚರ ಆರೋಪ: ಮೂವರು ಮಹಿಳೆಯರಿಗೆ ಮೂತ್ರ ಕುಡಿಸಿದ ಗ್ರಾಮಸ್ಥರು

Last Updated 27 ಸೆಪ್ಟೆಂಬರ್ 2022, 8:58 IST
ಅಕ್ಷರ ಗಾತ್ರ

ರಾಂಚಿ: ಜಾರ್ಖಂಡ್‌ ರಾಜ್ಯದಲ್ಲಿ ವಾಮಾಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಮೂವರು ಮಹಿಳೆಯರಿಗೆ ಬಲವಂತವಾಗಿ ಮೂತ್ರ ಕುಡಿಸಿ, ಮಲ ತಿನ್ನಿಸಿರುವ ಅಘಾತಕಾರಿ ಘಟನೆ ವರದಿಯಾಗಿದೆ.

ಜಾರ್ಖಂಡ್‌ನ ದುಮ್ಕಾ ಜಿಲ್ಲೆಯ ಅಸ್ವರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಜನರು ಈ ಮಹಿಳೆಯರು ವಾಮಾಚಾರ ಮಾಡುತ್ತಾರೆ ಎಂದು ಆರೋಪಿಸಿ ಅವರನ್ನು ಕಬ್ಬಿಣದ ಸರಳುಗಳಿಂದ ಥಳಿಸಿ, ಮಲ ಮೂತ್ರ ಕುಡಿಸಿದ್ದಾರೆ ಎಂದು ವರದಿಯಾಗಿದೆ.

ಘಟನೆ ತಿಳಿದು ಪೊಲೀಸರು ಗ್ರಾಮಕ್ಕೆ ಆಗಮಿಸಿ ಸಂತ್ರಸ್ತರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಬಗ್ಗೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT