ಮಾಲ್ಡಾ, ಪಶ್ಚಿಮ ಬಂಗಾಳ: ಇತ್ತೀಚೆಗಷ್ಟೇ ಉದ್ಘಾಟನೆಗೊಂಡಿದ್ದ ಹೌರಾ– ನ್ಯೂ ಜಲ್ಪೈಗುರಿ ಮಾರ್ಗದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಮೇಲೆ ಮಾಲ್ಡಾ ಜಿಲ್ಲೆಯಲ್ಲಿ ಸೋಮವಾರ ಸಂಜೆ 5.10ಕ್ಕೆ ಕಲ್ಲುತೂರಾಟ ನಡೆಸಲಾಗಿದೆ. ಈ ಪ್ರಕರಣದ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಆಯೋಗಕ್ಕೆ (ಎನ್ಐಎ) ವಹಿಸಬೇಕು ಎಂದು ಬಿಜೆಪಿ ಆಗ್ರಹಿಸಿದೆ.