ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಜರಾತ್‌ನಲ್ಲಿ ದನಕ್ಕೆ ಡಿಕ್ಕಿ ಹೊಡೆದ ವಂದೇ ಭಾರತ್ ಎಕ್ಸ್‌ಪ್ರೆಸ್

ವಂದೇ ಭಾರತ್ ಎಕ್ಸ್‌ಪ್ರೆಸ್ ಟ್ರೈನ್‌ಗೆ ಗುಜರಾತ್‌ನಲ್ಲಿ ಮತ್ತೆ ಸಂಕಷ್ಟ
Last Updated 2 ಡಿಸೆಂಬರ್ 2022, 1:36 IST
ಅಕ್ಷರ ಗಾತ್ರ

ಮುಂಬೈ: ಗಾಂಧಿನಗರ ಮತ್ತು ಮುಂಬೈ ಮಧ್ಯೆ ಸಂಚರಿಸುವ ವಂದೇ ಭಾರತ್ ಸೂಪರ್‌ಫಾಸ್ಟ್‌ ಎಕ್ಸ್‌ಪ್ರೆಸ್ ರೈಲು ಗುರುವಾರ ಸಂಜೆ ದನಕ್ಕೆ ಡಿಕ್ಕಿ ಹೊಡೆದಿದೆ.

ಉದ್ವಾಡ ಮತ್ತು ವಾಪಿ ನಿಲ್ದಾಣದ ಮಧ್ಯೆ ಈ ಅವಘಡ ಸಂಭವಿಸಿದೆ ಎಂದು ರೈಲ್ವೆ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಎರಡು ತಿಂಗಳ ಹಿಂದಷ್ಟೇ ಈ ಮಾರ್ಗದಲ್ಲಿ ವಂದೇ ಭಾರತ್ ಸೆಮಿ ಹೈ–ಸ್ಪೀಡ್ ರೈಲು ಸಂಚಾರ ಆರಂಭಿಸಿತ್ತು. ಅದಾದ ಬಳಿಕ, ದನಕ್ಕೆ ರೈಲು ಡಿಕ್ಕಿ ಹೊಡೆದಿರುವ ನಾಲ್ಕನೇ ಪ್ರಕರಣ ಇದಾಗಿದೆ.

ಲೆವೆಲ್ ಕ್ರಾಸಿಂಗ್ ಗೇಟ್ ಸಮೀಪ ಸಂಜೆ ಸಾಗುತ್ತಿದ್ದಾಗ ರೈಲು ದನಕ್ಕೆ ಡಿಕ್ಕಿ ಹೊಡೆದಿದೆ. ಅದರಿಂದಾಗಿ ರೈಲಿನ ಮುಂಭಾಗಕ್ಕೆ ಸ್ವಲ್ಪ ಹಾನಿಯಾಗಿದೆ. ಅದನ್ನು ಸರಿಪಡಿಸಲಾಗುತ್ತದೆ. ಅಪಘಾತದಿಂದಾಗಿ ರೈಲು 10 ನಿಮಿಷ ತಡವಾಗಿ ಪ್ರಯಾಣ ಮುಂದುವರಿಸಿದೆ ಎಂದು ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಸುಮಿತ್ ಠಾಕೂರ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT