<p><strong>ವಡೋದರಾ</strong>: ನಿನ್ನೆ (ಅ.06, ಗುರುವಾರ) ಎಮ್ಮೆಗಳ ಹಿಂಡಿಗೆ ಗುದ್ದಿ ಹಾನಿಗೀಡಾಗಿದ್ದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು, ಇಂದು (ಅ. 07, ಶುಕ್ರವಾರ) ಹಸುವಿಗೆ ಗುದ್ದಿದೆ. ಹೀಗಾಗಿ ರೈಲಿನ ಮುಂಭಾಗ ಅಲ್ಪ ಪ್ರಮಾಣದಲ್ಲಿ ಜಖಂಗೊಂಡಿದೆ.</p>.<p>‘ಮುಂಬೈನಿಂದ ಸುಮಾರು 433 ಕಿ.ಮೀ ದೂರದಲ್ಲಿರುವ ಕಂಜಾರಿ ಮತ್ತು ಆನಂದ್ ನಿಲ್ದಾಣಗಳ ನಡುವೆ ಮಧ್ಯಾಹ್ನ 3.49ರಲ್ಲಿ ಈ ಘಟನೆ ನಡೆದಿದೆ. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ’ ಎಂದು ಪಶ್ಚಿಮ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಸುಮಿತ್ ಠಾಕೂರ್ ತಿಳಿಸಿದ್ದಾರೆ. ರೈಲು ಗುಜರಾತ್ನಿಂದ ಮುಂಬೈಗೆ ತೆರಳುತ್ತಿತ್ತು.</p>.<p>‘ಶುಕ್ರವಾರ ಸಂಭವಿಸಿದ ಅಪಘಾತದಲ್ಲಿ ರೈಲಿನ ಮುಂಭಾಗ ಅಲ್ಪ ಪ್ರಮಾಣದಲ್ಲಿ ಜಖಂ (ಡೆಂಟ್) ಆಗಿದೆ. ರೈಲು ನಿಲುಗಡೆಯಾದ ಒಂದೇ ನಿಮಿಷದಲ್ಲಿ ಮತ್ತೆ ಪ್ರಯಾಣ ಆರಂಭಿಸಿತು’ ಎಂದು ಅವರು ಹೇಳಿದರು.</p>.<p>ಅಪಘಾತದಲ್ಲಿ ಹಸು ಬದುಕುಳಿದಿದೆಯೇ ಎಂಬುದು ತಕ್ಷಣಕ್ಕೆ ಸ್ಪಷ್ಟವಾಗಿಲ್ಲ.</p>.<p>ಗುರುವಾರ ಮುಂಬೈನಿಂದ ಗಾಂಧಿನಗರಕ್ಕೆ ತೆರಳುತ್ತಿದ್ದ ವೇಳೆ ವತ್ವಾ ಮತ್ತು ಮಣಿನಗರ ರೈಲು ನಿಲ್ದಾಣಗಳ ನಡುವೆ ರೈಲು ನಾಲ್ಕು ಎಮ್ಮೆಗಳಿಗೆ ಡಿಕ್ಕಿ ಹೊಡೆದಿತ್ತು. ಪರಿಣಾಮವಾಗಿ ನಾಲ್ಕು ಎಮ್ಮೆಗಳು ಮೃತಪಟ್ಟರೆ, ರೈಲಿನ ಮುಂಭಾಗಕ್ಕೆ ಹಾನಿಯುಂಟಾಗಿತ್ತು.</p>.<p>ರೈಲಿನ ಮುಂಭಾಗವನ್ನು ಶುಕ್ರವಾರವಷ್ಟೇ ದುರಸ್ತಿ ಮಾಡಿ, ರೈಲಿಗೆ ಮರಳಿ ಚಾಲನೆ ನೀಡಲಾಗಿತ್ತು. ದುರಸ್ತಿಯಾದ ದಿನವೇ ರೈಲಿಗೆ ಮತ್ತೊಂದು ಅಪಘಾತವಾಗಿದೆ.</p>.<p><strong>ಇದನ್ನೂ ಓದಿ</strong></p>.<p><a href="https://www.prajavani.net/india-news/new-vande-bharat-express-damaged-after-hitting-buffaloes-repaired-within-24-hours-978129.html" itemprop="url">ವಂದೇ ಭಾರತ ರೈಲು 24 ಗಂಟೆಗಳಲ್ಲಿ ದುರಸ್ತಿ: ಎಮ್ಮೆಗಳ ಮಾಲೀಕನ ವಿರುದ್ಧ ದೂರು </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಡೋದರಾ</strong>: ನಿನ್ನೆ (ಅ.06, ಗುರುವಾರ) ಎಮ್ಮೆಗಳ ಹಿಂಡಿಗೆ ಗುದ್ದಿ ಹಾನಿಗೀಡಾಗಿದ್ದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು, ಇಂದು (ಅ. 07, ಶುಕ್ರವಾರ) ಹಸುವಿಗೆ ಗುದ್ದಿದೆ. ಹೀಗಾಗಿ ರೈಲಿನ ಮುಂಭಾಗ ಅಲ್ಪ ಪ್ರಮಾಣದಲ್ಲಿ ಜಖಂಗೊಂಡಿದೆ.</p>.<p>‘ಮುಂಬೈನಿಂದ ಸುಮಾರು 433 ಕಿ.ಮೀ ದೂರದಲ್ಲಿರುವ ಕಂಜಾರಿ ಮತ್ತು ಆನಂದ್ ನಿಲ್ದಾಣಗಳ ನಡುವೆ ಮಧ್ಯಾಹ್ನ 3.49ರಲ್ಲಿ ಈ ಘಟನೆ ನಡೆದಿದೆ. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ’ ಎಂದು ಪಶ್ಚಿಮ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಸುಮಿತ್ ಠಾಕೂರ್ ತಿಳಿಸಿದ್ದಾರೆ. ರೈಲು ಗುಜರಾತ್ನಿಂದ ಮುಂಬೈಗೆ ತೆರಳುತ್ತಿತ್ತು.</p>.<p>‘ಶುಕ್ರವಾರ ಸಂಭವಿಸಿದ ಅಪಘಾತದಲ್ಲಿ ರೈಲಿನ ಮುಂಭಾಗ ಅಲ್ಪ ಪ್ರಮಾಣದಲ್ಲಿ ಜಖಂ (ಡೆಂಟ್) ಆಗಿದೆ. ರೈಲು ನಿಲುಗಡೆಯಾದ ಒಂದೇ ನಿಮಿಷದಲ್ಲಿ ಮತ್ತೆ ಪ್ರಯಾಣ ಆರಂಭಿಸಿತು’ ಎಂದು ಅವರು ಹೇಳಿದರು.</p>.<p>ಅಪಘಾತದಲ್ಲಿ ಹಸು ಬದುಕುಳಿದಿದೆಯೇ ಎಂಬುದು ತಕ್ಷಣಕ್ಕೆ ಸ್ಪಷ್ಟವಾಗಿಲ್ಲ.</p>.<p>ಗುರುವಾರ ಮುಂಬೈನಿಂದ ಗಾಂಧಿನಗರಕ್ಕೆ ತೆರಳುತ್ತಿದ್ದ ವೇಳೆ ವತ್ವಾ ಮತ್ತು ಮಣಿನಗರ ರೈಲು ನಿಲ್ದಾಣಗಳ ನಡುವೆ ರೈಲು ನಾಲ್ಕು ಎಮ್ಮೆಗಳಿಗೆ ಡಿಕ್ಕಿ ಹೊಡೆದಿತ್ತು. ಪರಿಣಾಮವಾಗಿ ನಾಲ್ಕು ಎಮ್ಮೆಗಳು ಮೃತಪಟ್ಟರೆ, ರೈಲಿನ ಮುಂಭಾಗಕ್ಕೆ ಹಾನಿಯುಂಟಾಗಿತ್ತು.</p>.<p>ರೈಲಿನ ಮುಂಭಾಗವನ್ನು ಶುಕ್ರವಾರವಷ್ಟೇ ದುರಸ್ತಿ ಮಾಡಿ, ರೈಲಿಗೆ ಮರಳಿ ಚಾಲನೆ ನೀಡಲಾಗಿತ್ತು. ದುರಸ್ತಿಯಾದ ದಿನವೇ ರೈಲಿಗೆ ಮತ್ತೊಂದು ಅಪಘಾತವಾಗಿದೆ.</p>.<p><strong>ಇದನ್ನೂ ಓದಿ</strong></p>.<p><a href="https://www.prajavani.net/india-news/new-vande-bharat-express-damaged-after-hitting-buffaloes-repaired-within-24-hours-978129.html" itemprop="url">ವಂದೇ ಭಾರತ ರೈಲು 24 ಗಂಟೆಗಳಲ್ಲಿ ದುರಸ್ತಿ: ಎಮ್ಮೆಗಳ ಮಾಲೀಕನ ವಿರುದ್ಧ ದೂರು </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>