ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಅತುಲ್ ಬಳಿ ಗೂಳಿಯೊಂದಕ್ಕೆ ಡಿಕ್ಕಿಯಾಗಿ ಜಖಂಗೊಂಡಿದೆ. ಇದರಿಂದ ರೈಲಿನ ಮುಂಭಾಗಕ್ಕೆ ಹಾನಿಯಾಗಿದ್ದು 15 ನಿಮಿಷ ತಡವಾಗಿ ಮುಂಬೈ ಸೆಂಟ್ರಲ್ ನಿಲ್ದಾಣವನ್ನು ತಲುಪಿದೆ. ಘಟನೆಯಲ್ಲಿ ಯಾವುದೇ ಪ್ರಯಾಣಿಕರಿಗೆ ಅಪಾಯವಾಗಿಲ್ಲ. ಗೂಳಿ ಸತ್ತಿದೆ ಎಂದುಪಶ್ಚಿಮ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಸುಮಿತ್ ಠಾಕೂರ್ ತಿಳಿಸಿದ್ದಾರೆ.