ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾರಾಣಸಿ ನ್ಯಾಯಾಲಯದಲ್ಲಿ ಜ್ಞಾನವಾಪಿ ಮಸೀದಿ ಪ್ರಕರಣದ ವಿಚಾರಣೆ ಮೇ 23ಕ್ಕೆ

Last Updated 19 ಮೇ 2022, 13:26 IST
ಅಕ್ಷರ ಗಾತ್ರ

ವಾರಣಸಿ: ವಾರಾಣಸಿ ನ್ಯಾಯಾಲಯವು ಜ್ಞಾನವಾಪಿ ಮಸೀದಿ ಪ್ರಕರಣದ ಮುಂದಿನ ವಿಚಾರಣೆಯನ್ನು ಮೇ 23ಕ್ಕೆ ನಿಗದಿ ಪಡಿಸಿದೆ.

ಜ್ಞಾನವಾಪಿ ಮಸೀದಿ ಪ್ರಕರಣದ ವಿಚಾರಣೆ ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ನಡೆಯಲಿದೆ.ಅಲ್ಲಿಯವರೆಗೆವಾರಣಾಸಿಯ ಸಿವಿಲ್ ನ್ಯಾಯಾಲಯವುಈಪ್ರಕರಣದ ವಿಚಾರಣೆಯನ್ನು ಮುಂದುವರಿಸಬಾರದು ಎಂದುಇಂದು (ಗುರುವಾರ) ಸೂಚಿಸಿದೆ. ಈ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಮೇ 23ಕ್ಕೆ ನಿಗದಿಪಡಿಸಲಾಗಿದೆ ಎಂದು ಹಿಂದೂ ಪರ ವಕೀಲ ಮದನ್‌ ಮೋಹನ್‌ ಯಾದವ್‌ ತಿಳಿಸಿದ್ದಾರೆ.

ಏನಿದು ಪ್ರಕರಣ
ಜ್ಞಾನವಾಪಿ ಮಸೀದಿಯ ಹೊರಗಿನ ಗೋಡೆ ಮೇಲಿರುವ ಶೃಂಗಾರ್ ಗೌರಿ, ಗಣೇಶ, ಹನುಮಾನ್ ಮತ್ತು ನಂದಿ ವಿಗ್ರಹಗಳಿಗೆ ಪ್ರತಿನಿತ್ಯ ಪೂಜೆ ಮಾಡಲು ಅನುಮತಿ ಕೋರಿ ದೆಹಲಿಯ ಮಹಿಳೆಯರಾದ ರಾಖಿ ಸಿಂಗ್, ಲಕ್ಷ್ಮಿ ದೇವಿ, ಸೀತಾ ಸಾಹು ಮತ್ತು ಇತರರು ಮನವಿ ಸಲ್ಲಿಸಿದರು. ಈಮನವಿಯ ಮೇರೆಗೆ ನ್ಯಾಯಾಧೀಶ ದಿವಾಕರ್ ಅವರು ಮಸೀದಿಯ ವಿಡಿಯೊಗ್ರಫಿ ಮತ್ತು ಸಮೀಕ್ಷೆಗೆ ಆದೇಶಿಸಿದ್ದರು.

ಏಪ್ರಿಲ್ 18, 2021ರಂದು ನ್ಯಾಯಾಲಯದ ಮೆಟ್ಟಿಲೇರಿದ್ದ ಮಹಿಳೆಯರು ಮಸೀದಿ ಗೊಡೆ ಮೇಲಿರುವ ವಿಗ್ರಹಗಳಿಗೆ ಯಾವುದೇ ಹಾನಿ ಮಾಡದಂತೆ ತಡೆಯಲು ನ್ಯಾಯಾಲಯದ ಆದೇಶವನ್ನು ಕೋರಿದ್ದರು.

ಆದರೆ, ಮಸೀದಿಯೊಳಗೆ ವಿಡಿಯೊಗ್ರಫಿ ಮಾಡಲು ನ್ಯಾಯಾಲಯವು ಯಾವುದೇ ಆದೇಶವನ್ನು ನೀಡಿಲ್ಲ. ಮಸೀದಿ ಪ್ರದೇಶವನ್ನು ಸುತ್ತುವರಿದ ಬ್ಯಾರಿಕೇಡ್‌ಗಳ ಹೊರಗೆ 'ಚಬುತ್ರ' (ಅಂಗಣ)ವರೆಗೆ ಮಾತ್ರ ಸಮೀಕ್ಷೆ ಮಾಡಬೇಕೆಂದು ಮಸೀದಿ ಆಡಳಿತ ಸಮಿತಿಯ ವಕೀಲರು ಈ ಹಿಂದೆ ವಾದಿಸಿದ್ದರು.

ನ್ಯಾಯಾಲಯದ ಆಯುಕ್ತರು ಶುಕ್ರವಾರ ಜ್ಞಾನವಾಪಿ-ಶೃಂಗಾರ ಗೌರಿ ಸಂಕೀರ್ಣದಲ್ಲಿರುವ ಮಸೀದಿಯ ಹೊರಗಿನ ಕೆಲವು ಪ್ರದೇಶಗಳಲ್ಲಿ ಎರಡು ಕಡೆಯವರ ಘೋಷಣೆಗಳ ನಡುವೆ ಅನಿರ್ದಿಷ್ಟ ಸಮೀಕ್ಷೆಯನ್ನು ನಡೆಸಿದ್ದರು. ಈ ವೇಳೆ, ನ್ಯಾಯಾಲಯದಿಂದ ನೇಮಕಗೊಂಡ ಕಮಿಷನರ್ ಪಕ್ಷಪಾತದಿಂದ ವರ್ತಿಸುತ್ತಿದ್ದಾರೆ ಎಂದು ಮುಸ್ಲಿಂ ಕಡೆಯವರು ಆರೋಪಿಸಿದ್ದರು. ಕೋರ್ಟ್ ಆದೇಶವಿಲ್ಲದೆ ಅವರು ಜ್ಞಾನವಾಪಿ ಮಸೀದಿಯೊಳಗೆ ವಿಡಿಯೋಗ್ರಫಿ ಮಾಡಲು ಪ್ರಯತ್ನಿಸಿದ್ದಾರೆ ಎಂದು ದೂರಿ ಅವರನ್ನು ಬದಲಾಯಿಸುವಂತೆ ಕೋರಿ ನ್ಯಾಯಾಲಯದ ಮೆಟ್ಟಿಲೇರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT