ಮುಂಬೈ: ‘ವೈದ್ಯಕೀಯ ಚಿಕಿತ್ಸೆ ಅಗತ್ಯವಿರುವ ಹಲವು ವೃದ್ಧರು ಸಹ ಜೈಲುಗಳಲ್ಲಿದ್ದಾರೆ. ಹಾಗಾಗಿ, ಎಲ್ಗಾರ್ ಪರಿಷತ್– ಮಾವೋವಾದಿ ಪ್ರಕರಣದ ಆರೋಪಿ, ಕವಿ, ಕಾರ್ಯಕರ್ತ ವರವರ ರಾವ್ ಅವರನ್ನು ತಲೋಜಾ ಜೈಲು ಅಧಿಕಾರಿಗಳಿಗೆ ಶರಣಾಗುವಂತೆ ನಿರ್ದೇಶಿಸಬೇಕು’ ಎಂದು ರಾಷ್ಟ್ರೀಯ ತನಿಖಾ ದಳವು (ಎನ್ಐಎ) ಸೋಮವಾರ ಬಾಂಬೆ ಹೈಕೋರ್ಟ್ ಅನ್ನು ಕೋರಿಕೊಂಡಿದೆ.