<p class="title"><strong>ಮುಂಬೈ</strong>: ಕವಿ, ಸಾಮಾಜಿಕ ಹೋರಾಟಗಾರ ವರವರ ರಾವ್ ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಅವಧಿಯನ್ನು ಜನವರಿ 7ವರೆಗೆ ಮುಂಬೈ ಹೈಕೋರ್ಟ್ ಸೋಮವಾರ ವಿಸ್ತರಿಸಿದೆ.</p>.<p class="title">ಎಲ್ಗಾರ್ ಪರಿಷತ್ ಪ್ರಕರಣ ಹಾಗೂ ನಕ್ಸಲರ ಜತೆ ನಂಟು ಹೊಂದಿದ ಪ್ರಕರಣದಲ್ಲಿ ವರವರ ರಾವ್ ಆರೋಪಿಯಾಗಿದ್ದಾರೆ.</p>.<p>ಕಳೆದ ತಿಂಗಳಿನಿಂದ ವರವರರಾವ್ ಅವರು ಮುಂಬೈನ ನಾನಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಸ್.ಎಸ್ ಶಿಂಧೆ ಮತ್ತು ಎಂ.ಎಸ್ ಕಾರ್ಣಿಕ್ ಅವರಿದ್ದ ನ್ಯಾಯಪೀಠ, ಜಾಮೀನು ಅರ್ಜಿಯ ವಿಚಾರಣೆಯನ್ನು ಮುಂದೂಡಿದೆ.</p>.<p>ರಾವ್ ಅವರ ಆರೋಗ್ಯ ಸ್ಥಿತಿಯ ಹೊಸ ವೈದ್ಯಕೀಯ ವರದಿಯನ್ನು ಮುಂದಿನ ವಿಚಾರಣೆಯ ದಿನಾಂಕದೊಳಗೆ ಸಲ್ಲಿಸುವಂತೆ ನ್ಯಾಯಪೀಠ ಮಹಾರಾಷ್ಟ್ರ ಸರ್ಕಾರಕ್ಕೆ ಸೂಚಿಸಿದೆ.</p>.<p>‘ರಾವ್ ಅವರ ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ.ಆದರೆ, ಅವರ ರಕ್ತದೊತ್ತಡ ಏರಿಳಿತಗೊಳ್ಳುತ್ತಿದ್ದು, ಆಸ್ಪತ್ರೆಯ ಸಿಬ್ಬಂದಿ ನಿಗಾ ವಹಿಸುತ್ತಿದ್ದಾರೆ’ ಎಂದು ಅವರ ವಕೀಲ ಆನಂದ್ ಗ್ರೋವರ್ ಅವರು ನ್ಯಾಯಾಲಕ್ಕೆ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಮುಂಬೈ</strong>: ಕವಿ, ಸಾಮಾಜಿಕ ಹೋರಾಟಗಾರ ವರವರ ರಾವ್ ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಅವಧಿಯನ್ನು ಜನವರಿ 7ವರೆಗೆ ಮುಂಬೈ ಹೈಕೋರ್ಟ್ ಸೋಮವಾರ ವಿಸ್ತರಿಸಿದೆ.</p>.<p class="title">ಎಲ್ಗಾರ್ ಪರಿಷತ್ ಪ್ರಕರಣ ಹಾಗೂ ನಕ್ಸಲರ ಜತೆ ನಂಟು ಹೊಂದಿದ ಪ್ರಕರಣದಲ್ಲಿ ವರವರ ರಾವ್ ಆರೋಪಿಯಾಗಿದ್ದಾರೆ.</p>.<p>ಕಳೆದ ತಿಂಗಳಿನಿಂದ ವರವರರಾವ್ ಅವರು ಮುಂಬೈನ ನಾನಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಸ್.ಎಸ್ ಶಿಂಧೆ ಮತ್ತು ಎಂ.ಎಸ್ ಕಾರ್ಣಿಕ್ ಅವರಿದ್ದ ನ್ಯಾಯಪೀಠ, ಜಾಮೀನು ಅರ್ಜಿಯ ವಿಚಾರಣೆಯನ್ನು ಮುಂದೂಡಿದೆ.</p>.<p>ರಾವ್ ಅವರ ಆರೋಗ್ಯ ಸ್ಥಿತಿಯ ಹೊಸ ವೈದ್ಯಕೀಯ ವರದಿಯನ್ನು ಮುಂದಿನ ವಿಚಾರಣೆಯ ದಿನಾಂಕದೊಳಗೆ ಸಲ್ಲಿಸುವಂತೆ ನ್ಯಾಯಪೀಠ ಮಹಾರಾಷ್ಟ್ರ ಸರ್ಕಾರಕ್ಕೆ ಸೂಚಿಸಿದೆ.</p>.<p>‘ರಾವ್ ಅವರ ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ.ಆದರೆ, ಅವರ ರಕ್ತದೊತ್ತಡ ಏರಿಳಿತಗೊಳ್ಳುತ್ತಿದ್ದು, ಆಸ್ಪತ್ರೆಯ ಸಿಬ್ಬಂದಿ ನಿಗಾ ವಹಿಸುತ್ತಿದ್ದಾರೆ’ ಎಂದು ಅವರ ವಕೀಲ ಆನಂದ್ ಗ್ರೋವರ್ ಅವರು ನ್ಯಾಯಾಲಕ್ಕೆ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>