‘ರಾಜ್ಯಗಳ ಹೊಣೆಗಾರಿಕೆಯ ಸ್ಥಾನದಲ್ಲಿರುವ ನಿಮ್ಮ ಪಕ್ಷದ ನಾಯಕರು ಸಹ ನಿಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಂತೆ ಕಾಣುತ್ತಿಲ್ಲ’ ಎಂದು ಛೇಡಿಸಿರುವ ಅವರು, ದೇಶಕ್ಕೆ ಮಾತ್ರವಲ್ಲ, ಜಗತ್ತಿನ ಹಲವು ದೇಶಗಳಿಗೆ ಲಸಿಕೆ ಲಭ್ಯವಾಗುವಂತೆ ಮಾಡಿದ ನಮ್ಮ ವಿಜ್ಞಾನಿಗಳಿಗೆ ಮತ್ತು ಲಸಿಕೆ ತಯಾರಕರಿಗೆ ಕಾಂಗ್ರೆಸ್ ಪಕ್ಷ ಕನಿಷ್ಠ ಕೃತಜ್ಞತೆಯನ್ನೂ ಅರ್ಪಿಸಿಲ್ಲ ಎಂದು ಆರೋಪಿಸಿದ್ದಾರೆ.