<p><strong>ನವದೆಹಲಿ</strong>: ನಿರುದ್ಯೋಗ, ಭ್ರಷ್ಟಾಚಾರ ಮತ್ತು ಹಣದುಬ್ಬರವು ಅಂತ್ಯವಾಗುವವರೆಗೂ ನನ್ನ ಹೋರಾಟ ಮುಂದುವರಿಯಲಿದೆ ಎಂದು ಬಿಜೆಪಿ ಸಂಸದ ವರುಣ್ ಗಾಂಧಿ ಭಾನುವಾರ ಹೇಳಿದ್ದಾರೆ.</p>.<p>ಮಕ್ಕಳು ಮತ್ತು ಯುವಕರಿಗೆ ಗೌರವ ಸಿಗಬೇಕು. ಅವರು ಸಹಾಯಕ್ಕಾಗಿ ಯಾರ ಮುಂದೆಯೂ ತಲೆಬಾಗಬಾರದು. ಅಂತಹ ಭಾರತಕ್ಕಾಗಿ ತಾನು ಕೆಲಸ ಮಾಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.</p>.<p>ಉತ್ತರ ಪ್ರದೇಶದಲ್ಲಿ ನಡೆದ ಸಾರ್ವಜನಿಕ ಸಭೆಯೊಂದರಲ್ಲಿ ಮಾತನಾಡಿರುವ ಅವರು, ನಿಮ್ಮ ಮಕ್ಕಳಿಗೆ ಕೆಲಸ ಸಿಗುವವರೆಗೂ, ನನ್ನ ‘ಸಂಘರ್ಷ’ ಮುಂದುವರಿಯಲಿದೆ. ಭ್ರಷ್ಟಾಚಾರದ ವಿರುದ್ಧವೂ ನನ್ನ ಹೋರಾಟ ನಿರಂತರವಾಗಿ ಇರಲಿದೆ’ ಎಂದು ಹೇಳಿದ್ದಾರೆ.</p>.<p>‘ನಮ್ಮ ಪೂರ್ವಜರ ತ್ಯಾಗವನ್ನು ವ್ಯರ್ಥವಾಗಲು ನಾವು ಬಿಡುವುದಿಲ್ಲ. ಜನರು ಮೂಲಭೂತ ಸಮಸ್ಯೆಗಳು, ಅನ್ಯಾಯ ಮತ್ತು ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತುವ ಸಮಯ ಬಂದಿದೆ’ ಎಂದು ತಮ್ಮದೇ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ನಿರುದ್ಯೋಗ, ಭ್ರಷ್ಟಾಚಾರ ಮತ್ತು ಹಣದುಬ್ಬರವು ಅಂತ್ಯವಾಗುವವರೆಗೂ ನನ್ನ ಹೋರಾಟ ಮುಂದುವರಿಯಲಿದೆ ಎಂದು ಬಿಜೆಪಿ ಸಂಸದ ವರುಣ್ ಗಾಂಧಿ ಭಾನುವಾರ ಹೇಳಿದ್ದಾರೆ.</p>.<p>ಮಕ್ಕಳು ಮತ್ತು ಯುವಕರಿಗೆ ಗೌರವ ಸಿಗಬೇಕು. ಅವರು ಸಹಾಯಕ್ಕಾಗಿ ಯಾರ ಮುಂದೆಯೂ ತಲೆಬಾಗಬಾರದು. ಅಂತಹ ಭಾರತಕ್ಕಾಗಿ ತಾನು ಕೆಲಸ ಮಾಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.</p>.<p>ಉತ್ತರ ಪ್ರದೇಶದಲ್ಲಿ ನಡೆದ ಸಾರ್ವಜನಿಕ ಸಭೆಯೊಂದರಲ್ಲಿ ಮಾತನಾಡಿರುವ ಅವರು, ನಿಮ್ಮ ಮಕ್ಕಳಿಗೆ ಕೆಲಸ ಸಿಗುವವರೆಗೂ, ನನ್ನ ‘ಸಂಘರ್ಷ’ ಮುಂದುವರಿಯಲಿದೆ. ಭ್ರಷ್ಟಾಚಾರದ ವಿರುದ್ಧವೂ ನನ್ನ ಹೋರಾಟ ನಿರಂತರವಾಗಿ ಇರಲಿದೆ’ ಎಂದು ಹೇಳಿದ್ದಾರೆ.</p>.<p>‘ನಮ್ಮ ಪೂರ್ವಜರ ತ್ಯಾಗವನ್ನು ವ್ಯರ್ಥವಾಗಲು ನಾವು ಬಿಡುವುದಿಲ್ಲ. ಜನರು ಮೂಲಭೂತ ಸಮಸ್ಯೆಗಳು, ಅನ್ಯಾಯ ಮತ್ತು ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತುವ ಸಮಯ ಬಂದಿದೆ’ ಎಂದು ತಮ್ಮದೇ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>