ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಮೂರು ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಗಳ ಬೇಡಿಕೆಗಳಲ್ಲಿ ಒಂದಾದ ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್ಪಿ) ಕಾನೂನು ಖಾತರಿಯನ್ನು ನೀಡುವಂತೆ ವರುಣ್ ಗಾಂಧಿ ಒತ್ತಾಯಿಸಿದ್ದಾರೆ. ‘ಎಂಎಸ್ಪಿಯನ್ನು ಕಾನೂನು ವ್ಯಾಪ್ತಿಗೆ ತರದಿದ್ದರೆ, 'ಮಂಡಿ'ಗಳಲ್ಲಿ (ಕೃಷಿ ಉತ್ಪನ್ನಗಳ ಮಾರುಕಟ್ಟೆ) ರೈತರ ಶೋಷಣೆ ಮುಂದುವರಿಯುತ್ತದೆ‘ ಎಂದು ಅವರು ಹೇಳಿದ್ದಾರೆ.