<p><strong>ನವದೆಹಲಿ:</strong> ಯುವ ಜನರಲ್ಲಿ ಅಂಗಾಂಗ ದಾನವನ್ನು ಉತ್ತೇಜಿಸುವುದಕ್ಕಾಗಿ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಸಂಸದರ ಖಾಸಗಿ ಮಸೂದೆಯೊಂದನ್ನು ಮಂಡಿಸುವುದಾಗಿ ಬಿಜೆಪಿ ಸಂಸದ ವರುಣ್ ಗಾಂಧಿ ಹೇಳಿದ್ದಾರೆ.</p>.<p>’ಮಾನವ ಅಂಗಾಂಗ ದಾನ ಮತ್ತು ಕಸಿ ಮಸೂದೆ –2020 (‘Donation and Transplantation of Human Organ Bill, 2020’) ಅನ್ನು ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಮಂಡಿಸಲಾಗುವುದು’ ಎಂದು ಅವರು ತಿಳಿಸಿದ್ದಾರೆ.</p>.<p>ಭಾರತದಲ್ಲಿ ಅಂಗಾಂಗ ದಾನ ಮಾಡುವವರ ಕೊರತೆ ಇದೆ. ಮಾತ್ರವಲ್ಲ., ಅಂಗಾಂಗಗಳ ಬೇಡಿಕೆ ಮತ್ತು ಪೂರಕೆಯಲ್ಲೂ ತುಂಬಾ ಅಂತರವಿದೆ. ಈಗ ಮಂಡಿಸಲಿರುವ ಮಸೂದೆಯು ಈ ಎಲ್ಲ ಕೊರತೆಗಳನ್ನು ನೀಗಿಸಲಿದ್ದು, ವ್ಯಕ್ತಿ ಸತ್ತ ನಂತರ ಅಂಗಾಗ ದಾನ ಮಾಡುವುದನ್ನು ಕಡ್ಡಾಯಗೊಳಿಸಲಿದೆ ಎಂದು ಅವರು ಹೇಳಿದರು.</p>.<p>ಭಾರತದಲ್ಲಿ ಪ್ರತಿ ವರ್ಷ ಐದು ಲಕ್ಷ ವ್ಯಕ್ತಿಗಳು ಅಂಗಾಂಗ ಕೊರತೆಯಿಂದ ಸಾವನ್ನಪ್ಪುತ್ತಿದ್ದಾರೆ. ಪ್ರತಿ ವರ್ಷ 2 ಲಕ್ಷ ಮೂತ್ರಪಿಂಡಗಳು, 50 ಸಾವಿರ ಹೃದಯಗಳು ಮತ್ತು 50 ಸಾವಿರ ಲಿವರ್ಗಳು ಕಸಿಗಾಗಿ ಬೇಕಾಗಿವೆ ಎಂದು ಮಾಹಿತಿ ನೀಡಿದ್ದಾರೆ.</p>.<p>ಟ್ವಿಟರ್ನಲ್ಲಿ#OrganDonationDay ಹ್ಯಾಷ್ಟ್ಯಾಗ್ ಮೂಲಕ ಟ್ವೀಟ್ ಮಾಡಿರುವ ವರುಣ್, ’ದೇಶದಲ್ಲಿರುವ ಎಲ್ಲ ಯುವ ನಾಗರಿಕರು ಅಂಗಾಂಗ ದಾನಕ್ಕೆ ಸ್ವಯಂ ಪ್ರೇರಿತವಾಗಿ ನೋಂದಣಿ ಮಾಡಿಸಿಕೊಳ್ಳುವುದನ್ನು ಉತ್ತೇಜಿಸಲು ಈ ಸಂಸದರ ಖಾಸಗಿ ಮಸೂದೆಯನ್ನು ಮಂಡಿಸುತ್ತಿದ್ದೇನೆ. ಇದರಿಂದ ಅಂಗಾಗ ಕೊರತೆಯಿಂದ ಸಾವನ್ನಪ್ಪುವವರ ಸಂಖ್ಯೆಯನ್ನು ಕಡಿತಗೊಳಿಸಲು ಸಾಧ್ಯವಿದೆ’ ಎಂದು ಉಲ್ಲೇಖಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಯುವ ಜನರಲ್ಲಿ ಅಂಗಾಂಗ ದಾನವನ್ನು ಉತ್ತೇಜಿಸುವುದಕ್ಕಾಗಿ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಸಂಸದರ ಖಾಸಗಿ ಮಸೂದೆಯೊಂದನ್ನು ಮಂಡಿಸುವುದಾಗಿ ಬಿಜೆಪಿ ಸಂಸದ ವರುಣ್ ಗಾಂಧಿ ಹೇಳಿದ್ದಾರೆ.</p>.<p>’ಮಾನವ ಅಂಗಾಂಗ ದಾನ ಮತ್ತು ಕಸಿ ಮಸೂದೆ –2020 (‘Donation and Transplantation of Human Organ Bill, 2020’) ಅನ್ನು ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಮಂಡಿಸಲಾಗುವುದು’ ಎಂದು ಅವರು ತಿಳಿಸಿದ್ದಾರೆ.</p>.<p>ಭಾರತದಲ್ಲಿ ಅಂಗಾಂಗ ದಾನ ಮಾಡುವವರ ಕೊರತೆ ಇದೆ. ಮಾತ್ರವಲ್ಲ., ಅಂಗಾಂಗಗಳ ಬೇಡಿಕೆ ಮತ್ತು ಪೂರಕೆಯಲ್ಲೂ ತುಂಬಾ ಅಂತರವಿದೆ. ಈಗ ಮಂಡಿಸಲಿರುವ ಮಸೂದೆಯು ಈ ಎಲ್ಲ ಕೊರತೆಗಳನ್ನು ನೀಗಿಸಲಿದ್ದು, ವ್ಯಕ್ತಿ ಸತ್ತ ನಂತರ ಅಂಗಾಗ ದಾನ ಮಾಡುವುದನ್ನು ಕಡ್ಡಾಯಗೊಳಿಸಲಿದೆ ಎಂದು ಅವರು ಹೇಳಿದರು.</p>.<p>ಭಾರತದಲ್ಲಿ ಪ್ರತಿ ವರ್ಷ ಐದು ಲಕ್ಷ ವ್ಯಕ್ತಿಗಳು ಅಂಗಾಂಗ ಕೊರತೆಯಿಂದ ಸಾವನ್ನಪ್ಪುತ್ತಿದ್ದಾರೆ. ಪ್ರತಿ ವರ್ಷ 2 ಲಕ್ಷ ಮೂತ್ರಪಿಂಡಗಳು, 50 ಸಾವಿರ ಹೃದಯಗಳು ಮತ್ತು 50 ಸಾವಿರ ಲಿವರ್ಗಳು ಕಸಿಗಾಗಿ ಬೇಕಾಗಿವೆ ಎಂದು ಮಾಹಿತಿ ನೀಡಿದ್ದಾರೆ.</p>.<p>ಟ್ವಿಟರ್ನಲ್ಲಿ#OrganDonationDay ಹ್ಯಾಷ್ಟ್ಯಾಗ್ ಮೂಲಕ ಟ್ವೀಟ್ ಮಾಡಿರುವ ವರುಣ್, ’ದೇಶದಲ್ಲಿರುವ ಎಲ್ಲ ಯುವ ನಾಗರಿಕರು ಅಂಗಾಂಗ ದಾನಕ್ಕೆ ಸ್ವಯಂ ಪ್ರೇರಿತವಾಗಿ ನೋಂದಣಿ ಮಾಡಿಸಿಕೊಳ್ಳುವುದನ್ನು ಉತ್ತೇಜಿಸಲು ಈ ಸಂಸದರ ಖಾಸಗಿ ಮಸೂದೆಯನ್ನು ಮಂಡಿಸುತ್ತಿದ್ದೇನೆ. ಇದರಿಂದ ಅಂಗಾಗ ಕೊರತೆಯಿಂದ ಸಾವನ್ನಪ್ಪುವವರ ಸಂಖ್ಯೆಯನ್ನು ಕಡಿತಗೊಳಿಸಲು ಸಾಧ್ಯವಿದೆ’ ಎಂದು ಉಲ್ಲೇಖಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>