<p class="title">ಕೊಚ್ಚಿ(ಪಿಟಿಐ):ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಕಳುಹಿಸಿರುವ ಷೋಕಾಸ್ ನೋಟಿಸ್ಗಳಿಗೆ ಉತ್ತರಿಸಲು ಕುಲಪತಿಗಳಿಗೆ (ವಿ.ಸಿಗಳು) ನೀಡಿದ ಸಮಯವನ್ನು ಕೇರಳ ಹೈಕೋರ್ಟ್ ಗುರುವಾರ ನ.7ರವರೆಗೆ ವಿಸ್ತರಿಸಿದೆ. ಷೋಕಾಸ್ನೋಟಿಸ್ಗೆ ತಡೆಯಾಜ್ಞೆ ನೀಡಲು ನ್ಯಾಯಮೂರ್ತಿ ದೇವನ್ ರಾಮಚಂದ್ರನ್ ನಿರಾಕರಿಸಿದರು.</p>.<p class="title">ಇತ್ತೀಚಿನ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಅವರ ನೇಮಕಾತಿಗಳು ಕಾನೂನುಬಾಹಿರ ಆಗಿರುವುದರಿಂದ, ತಮ್ಮ ಹುದ್ದೆಗಳಲ್ಲಿ ಮುಂದುವರಿಯಲು ಅವರಿಗೆ ಏಕೆ ಅವಕಾಶ ನೀಡಬೇಕು ಎಂದು ಕುಲಪತಿಗಳಿಂದ ವಿವರಣೆ ಕೇಳಲಾಗಿದೆ.</p>.<p>ತಮ್ಮ ಆಕ್ಷೇಪಣೆಗಳನ್ನು ಸಲ್ಲಿಸಲು ಮತ್ತು ವೈಯಕ್ತಿಕ ವಿಚಾರಣೆಗೆ ಹಾಜರಾಗಲು ಸಮಯ ನೀಡಿದ್ದಾರೆ ಎಂದು ರಾಜ್ಯಪಾಲರ ಪರ ಹಾಜರಾದ ಹಿರಿಯ ವಕೀಲ ಜಾಜು ಬಾಬು ಹೇಳಿದರು.</p>.<p>ರಾಜ್ಯಪಾಲರ ನೋಟಿಸ್ ಕಾನೂನುಬಾಹಿರ ಮತ್ತು ಅನೂರ್ಜಿತ ಎಂದು ಆರೋಪಿಸಿರುವ ಕುಲಪತಿಗಳ ಅರ್ಜಿಯನ್ನು ನ. 8 ರಂದು ವಿಚಾರಣೆಗೆ ಕೈಗೆತ್ತಿಕೊಳ್ಳಲು ನ್ಯಾಯಾಲಯವು ಪಟ್ಟಿ ಮಾಡಿದೆ. ಕುಲಾಧಿಪತಿಯೂ ಆಗಿರುವ ರಾಜ್ಯಪಾಲ ಖಾನ್ ಅವರು ರಾಜ್ಯದ 11 ವಿಶ್ವವಿದ್ಯಾಲಯಗಳ ಕುಲಪತಿಗಳಿಗೆ ಷೋಕಾಸ್ ನೋಟಿಸ್ ಜಾರಿ ಮಾಡಿದ್ದರು.</p>.<p>ಆರೋಪ ನಿರಾಕರಣೆ: ಕುಲಪತಿಗಳ ನೇಮಕಾತಿಯಲ್ಲಿ ರಾಜಕೀಯ ಹಸ್ತಕ್ಷೇಪ ಮಾಡಲಾಗುತ್ತಿದೆ ಎಂಬ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಆರೋಪವನ್ನು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ತಳ್ಳಿ ಹಾಕಿದರು.</p>.<p>ನೇಮಕಾತಿಯಲ್ಲಿ ತಮ್ಮ ಹಸ್ತಕ್ಷೇಪದ ಒಂದು ಉದಾಹರಣೆ ತೋರಿಸಿದರೆ ರಾಜೀನಾಮೆ ನೀಡಲಾಗುವುದು. ರಾಜ್ಯದಲ್ಲಿ ಕಳ್ಳಸಾಗಾಣಿಕೆ ಚಟುವಟಿಕೆಗಳಿಗೆ ಮುಖ್ಯಮಂತ್ರಿಗಳ ಕಚೇರಿ ಪ್ರೋತ್ಸಾಹ ನೀಡುತ್ತಿದೆ ಎಂದು ಆರೋಪಿಸಿದರು.</p>.<p>‘ಮುಖ್ಯಮಂತ್ರಿ ಕಚೇರಿಯಲ್ಲಿ ಕುಳಿತವರು ಕಣ್ಣೂರು ವಿಶ್ವವಿದ್ಯಾಲಯದ ಕುಲಪತಿಗೆ ತಮ್ಮ ಸಂಬಂಧಿಕರನ್ನು ನೇಮಿಸಲು ಆದೇಶಿಸುತ್ತಾರೆ. ಆದರೆ ಆ ಸ್ಥಾನಕ್ಕೆ ಅವರು ಅನರ್ಹರು.ನಾನು ಎಂದಿಗೂ ಹಸ್ತಕ್ಷೇಪ ಮಾಡಿಲ್ಲ. ಆದರೆ, ರಾಜ್ಯ ಸರ್ಕಾರ, ಮುಖ್ಯಮಂತ್ರಿ ಕಚೇರಿ ಮತ್ತು ಸಿ.ಎಂ ಆಪ್ತರು ಕಳ್ಳಸಾಗಾಣಿಕೆ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರೆ, ಖಂಡಿತ ನಾನು ಮಧ್ಯಪ್ರವೇಶಿಸಲು ಕಾರಣಗಳಿವೆ’ ಎಂದು ಹೇಳಿದರು.</p>.<p>ತಮ್ಮ ವಿರುದ್ಧದ ಆರೋಪ ಸಾಬೀತುಪಡಿಸಲು ಅಥವಾ ಸಮರ್ಥಿಸಲು ಸಾಧ್ಯವಾಗದಿದ್ದರೆ ರಾಜೀನಾಮೆ ನೀಡಲು ಸಾಧ್ಯವೇ ಎಂದು ಖಾನ್ ಮುಖ್ಯಮಂತ್ರಿಗೆ ಬಹಿರಂಗವಾಗಿ ಸವಾಲು ಹಾಕಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title">ಕೊಚ್ಚಿ(ಪಿಟಿಐ):ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಕಳುಹಿಸಿರುವ ಷೋಕಾಸ್ ನೋಟಿಸ್ಗಳಿಗೆ ಉತ್ತರಿಸಲು ಕುಲಪತಿಗಳಿಗೆ (ವಿ.ಸಿಗಳು) ನೀಡಿದ ಸಮಯವನ್ನು ಕೇರಳ ಹೈಕೋರ್ಟ್ ಗುರುವಾರ ನ.7ರವರೆಗೆ ವಿಸ್ತರಿಸಿದೆ. ಷೋಕಾಸ್ನೋಟಿಸ್ಗೆ ತಡೆಯಾಜ್ಞೆ ನೀಡಲು ನ್ಯಾಯಮೂರ್ತಿ ದೇವನ್ ರಾಮಚಂದ್ರನ್ ನಿರಾಕರಿಸಿದರು.</p>.<p class="title">ಇತ್ತೀಚಿನ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಅವರ ನೇಮಕಾತಿಗಳು ಕಾನೂನುಬಾಹಿರ ಆಗಿರುವುದರಿಂದ, ತಮ್ಮ ಹುದ್ದೆಗಳಲ್ಲಿ ಮುಂದುವರಿಯಲು ಅವರಿಗೆ ಏಕೆ ಅವಕಾಶ ನೀಡಬೇಕು ಎಂದು ಕುಲಪತಿಗಳಿಂದ ವಿವರಣೆ ಕೇಳಲಾಗಿದೆ.</p>.<p>ತಮ್ಮ ಆಕ್ಷೇಪಣೆಗಳನ್ನು ಸಲ್ಲಿಸಲು ಮತ್ತು ವೈಯಕ್ತಿಕ ವಿಚಾರಣೆಗೆ ಹಾಜರಾಗಲು ಸಮಯ ನೀಡಿದ್ದಾರೆ ಎಂದು ರಾಜ್ಯಪಾಲರ ಪರ ಹಾಜರಾದ ಹಿರಿಯ ವಕೀಲ ಜಾಜು ಬಾಬು ಹೇಳಿದರು.</p>.<p>ರಾಜ್ಯಪಾಲರ ನೋಟಿಸ್ ಕಾನೂನುಬಾಹಿರ ಮತ್ತು ಅನೂರ್ಜಿತ ಎಂದು ಆರೋಪಿಸಿರುವ ಕುಲಪತಿಗಳ ಅರ್ಜಿಯನ್ನು ನ. 8 ರಂದು ವಿಚಾರಣೆಗೆ ಕೈಗೆತ್ತಿಕೊಳ್ಳಲು ನ್ಯಾಯಾಲಯವು ಪಟ್ಟಿ ಮಾಡಿದೆ. ಕುಲಾಧಿಪತಿಯೂ ಆಗಿರುವ ರಾಜ್ಯಪಾಲ ಖಾನ್ ಅವರು ರಾಜ್ಯದ 11 ವಿಶ್ವವಿದ್ಯಾಲಯಗಳ ಕುಲಪತಿಗಳಿಗೆ ಷೋಕಾಸ್ ನೋಟಿಸ್ ಜಾರಿ ಮಾಡಿದ್ದರು.</p>.<p>ಆರೋಪ ನಿರಾಕರಣೆ: ಕುಲಪತಿಗಳ ನೇಮಕಾತಿಯಲ್ಲಿ ರಾಜಕೀಯ ಹಸ್ತಕ್ಷೇಪ ಮಾಡಲಾಗುತ್ತಿದೆ ಎಂಬ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಆರೋಪವನ್ನು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ತಳ್ಳಿ ಹಾಕಿದರು.</p>.<p>ನೇಮಕಾತಿಯಲ್ಲಿ ತಮ್ಮ ಹಸ್ತಕ್ಷೇಪದ ಒಂದು ಉದಾಹರಣೆ ತೋರಿಸಿದರೆ ರಾಜೀನಾಮೆ ನೀಡಲಾಗುವುದು. ರಾಜ್ಯದಲ್ಲಿ ಕಳ್ಳಸಾಗಾಣಿಕೆ ಚಟುವಟಿಕೆಗಳಿಗೆ ಮುಖ್ಯಮಂತ್ರಿಗಳ ಕಚೇರಿ ಪ್ರೋತ್ಸಾಹ ನೀಡುತ್ತಿದೆ ಎಂದು ಆರೋಪಿಸಿದರು.</p>.<p>‘ಮುಖ್ಯಮಂತ್ರಿ ಕಚೇರಿಯಲ್ಲಿ ಕುಳಿತವರು ಕಣ್ಣೂರು ವಿಶ್ವವಿದ್ಯಾಲಯದ ಕುಲಪತಿಗೆ ತಮ್ಮ ಸಂಬಂಧಿಕರನ್ನು ನೇಮಿಸಲು ಆದೇಶಿಸುತ್ತಾರೆ. ಆದರೆ ಆ ಸ್ಥಾನಕ್ಕೆ ಅವರು ಅನರ್ಹರು.ನಾನು ಎಂದಿಗೂ ಹಸ್ತಕ್ಷೇಪ ಮಾಡಿಲ್ಲ. ಆದರೆ, ರಾಜ್ಯ ಸರ್ಕಾರ, ಮುಖ್ಯಮಂತ್ರಿ ಕಚೇರಿ ಮತ್ತು ಸಿ.ಎಂ ಆಪ್ತರು ಕಳ್ಳಸಾಗಾಣಿಕೆ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರೆ, ಖಂಡಿತ ನಾನು ಮಧ್ಯಪ್ರವೇಶಿಸಲು ಕಾರಣಗಳಿವೆ’ ಎಂದು ಹೇಳಿದರು.</p>.<p>ತಮ್ಮ ವಿರುದ್ಧದ ಆರೋಪ ಸಾಬೀತುಪಡಿಸಲು ಅಥವಾ ಸಮರ್ಥಿಸಲು ಸಾಧ್ಯವಾಗದಿದ್ದರೆ ರಾಜೀನಾಮೆ ನೀಡಲು ಸಾಧ್ಯವೇ ಎಂದು ಖಾನ್ ಮುಖ್ಯಮಂತ್ರಿಗೆ ಬಹಿರಂಗವಾಗಿ ಸವಾಲು ಹಾಕಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>