ಎಸ್ಎನ್ಡಿಪಿ ಮುಖಂಡ ವೆಲ್ಲಪಳ್ಳಿ ನಟೇಶನ್ ಅವರ 84ನೇ ಜನ್ಮದಿನದ ಸಂದರ್ಭದಲ್ಲಿ ಮಾತನಾಡಿದ ಸುರೇಂದ್ರನ್, ‘ಕಾಂಗ್ರೆಸ್ ಹಾಗೂ ಸಿಪಿಎಂ ಮುಖಂಡರ ಪ್ರತಿಕ್ರಿಯೆಗಳನ್ನು ಗಮನಿಸಿದರೆ, ಮತ ಬ್ಯಾಂಕ್ ರಾಜಕಾರಣದ ಉದ್ದೇಶದಿಂದ ಆ ಎರಡೂ ಪಕ್ಷಗಳು ಧಾರ್ಮಿಕ ಭಯೋತ್ಪಾದನೆಯನ್ನು ಪ್ರೋತ್ಸಾಹಿಸುತ್ತಿರುವುದು ಸ್ಪಷ್ಟವಾಗುತ್ತದೆ’ ಎಂದೂ ಟೀಕಿಸಿದರು.