<p><strong>ಕೊಚ್ಚಿ</strong>: ಪ್ರಸಿದ್ಧ ಮಲಯಾಳಂ ಚಿತ್ರ ನಟ ಕೆಟಿಎಸ್ ಕೆಟಿಎಸ್ ಪಡನ್ನಯಿಲ್ ಅವರು(88) ವಯೋ ಸಹಜ ಕಾಯಿಲೆಯಿಂದಾಗಿ ಇಲ್ಲಿನ ಆಸ್ಪತ್ರೆಯಲ್ಲಿ ಗುರುವಾರ ಮುಂಜಾನೆ ನಿಧನರಾದರು ಎಂದು ಮೂಲಗಳು ತಿಳಿಸಿವೆ.</p>.<p>‘ಜುಲೈ 19ರಿಂದ ಇಲ್ಲಿನ ಇಂದಿರಾ ಗಾಂಧಿ ಸಹಕಾರಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಬಳಿಕ ಅವರನ್ನು ಹೃದಯ ಆರೈಕೆ ಘಟಕಕ್ಕೆ ಸ್ಥಳಾಂತರಿಸಲಾಗಿತ್ತು. ಬುಧವಾರ ಬೆಳಿಗ್ಗೆ 6.40ಕ್ಕೆ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು’ ಎಂದು ಆಸ್ಪತ್ರೆ ವಕ್ತಾರರು ಹೇಳಿದರು.</p>.<p>ರಂಗಭೂಮಿ ಮೂಲಕ ಪಡನ್ನಯಿಲ್ ಅವರು ಅಭಿನಯ ವೃತ್ತಿಯನ್ನು ಆರಂಭಿಸಿದರು. 1990ರ ದಶಕದಲ್ಲಿ ಅವರು ಮಾಲಯಾಳಂ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದರು.</p>.<p>ರಾಜಸೇನನ್ ನಿರ್ದೇಶನದ ‘ಅನಿಯನ್ ಬಾವಾ ಚೆಟ್ಟನ್ ಬಾವಾ’ ಚಿತ್ರವು ಅವರ ಚೊಚ್ಚಲ ಚಿತ್ರವಾಗಿದ್ದು 60 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಅವರು ತಮ್ಮ ಹಾಸ್ಯ ನಟನೆಗೆ ಜನಪ್ರಿಯತೆ ಪಡೆದಿದ್ದರು. ಕಿರುತೆರೆಯಲ್ಲೂ ಕಾಣಿಸಿಕೊಂಡಿದ್ದರು.</p>.<p>ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಶಿಕ್ಷಣ ಸಚಿವ ವಿ.ಸಿವನ್ ಕುಟ್ಟಿ ಅವರು ಸಂತಾಪ ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಚ್ಚಿ</strong>: ಪ್ರಸಿದ್ಧ ಮಲಯಾಳಂ ಚಿತ್ರ ನಟ ಕೆಟಿಎಸ್ ಕೆಟಿಎಸ್ ಪಡನ್ನಯಿಲ್ ಅವರು(88) ವಯೋ ಸಹಜ ಕಾಯಿಲೆಯಿಂದಾಗಿ ಇಲ್ಲಿನ ಆಸ್ಪತ್ರೆಯಲ್ಲಿ ಗುರುವಾರ ಮುಂಜಾನೆ ನಿಧನರಾದರು ಎಂದು ಮೂಲಗಳು ತಿಳಿಸಿವೆ.</p>.<p>‘ಜುಲೈ 19ರಿಂದ ಇಲ್ಲಿನ ಇಂದಿರಾ ಗಾಂಧಿ ಸಹಕಾರಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಬಳಿಕ ಅವರನ್ನು ಹೃದಯ ಆರೈಕೆ ಘಟಕಕ್ಕೆ ಸ್ಥಳಾಂತರಿಸಲಾಗಿತ್ತು. ಬುಧವಾರ ಬೆಳಿಗ್ಗೆ 6.40ಕ್ಕೆ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು’ ಎಂದು ಆಸ್ಪತ್ರೆ ವಕ್ತಾರರು ಹೇಳಿದರು.</p>.<p>ರಂಗಭೂಮಿ ಮೂಲಕ ಪಡನ್ನಯಿಲ್ ಅವರು ಅಭಿನಯ ವೃತ್ತಿಯನ್ನು ಆರಂಭಿಸಿದರು. 1990ರ ದಶಕದಲ್ಲಿ ಅವರು ಮಾಲಯಾಳಂ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದರು.</p>.<p>ರಾಜಸೇನನ್ ನಿರ್ದೇಶನದ ‘ಅನಿಯನ್ ಬಾವಾ ಚೆಟ್ಟನ್ ಬಾವಾ’ ಚಿತ್ರವು ಅವರ ಚೊಚ್ಚಲ ಚಿತ್ರವಾಗಿದ್ದು 60 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಅವರು ತಮ್ಮ ಹಾಸ್ಯ ನಟನೆಗೆ ಜನಪ್ರಿಯತೆ ಪಡೆದಿದ್ದರು. ಕಿರುತೆರೆಯಲ್ಲೂ ಕಾಣಿಸಿಕೊಂಡಿದ್ದರು.</p>.<p>ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಶಿಕ್ಷಣ ಸಚಿವ ವಿ.ಸಿವನ್ ಕುಟ್ಟಿ ಅವರು ಸಂತಾಪ ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>