ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದ ಶಿಕ್ಷಕರೂ ಭಗವದ್ಗೀತೆಯನ್ನು ಅಧ್ಯಯನ ಮಾಡುವಂತೆ ಮಾಡಬೇಕು. ಭಗವದ್ಗೀತೆಯ ಎಲ್ಲ 18 ಅಧ್ಯಾಯಗಳ ಬೋಧನೆ ಹಾಗೂ ಕಲಿಕೆಯನ್ನು ಶಿಕ್ಷಕರ ತರಬೇತಿ ಪಠ್ಯಕ್ರಮದ ಒಂದು ಭಾಗವಾಗಿ ಮಾಡಬೇಕು. ಇದರಿಂದ ವಿದ್ಯಾರ್ಥಿಗಳಲ್ಲಿ ನೈತಿಕ ಮೌಲ್ಯಗಳನ್ನು ಮತ್ತು ಕರ್ತವ್ಯಪ್ರಜ್ಞೆಯನ್ನು ಬೆಳಸಬಹುದಾಗಿದೆ ಎಂದು ಅವರು ಹೇಳಿದ್ದಾರೆ.