ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

16 ಅಡಿ ಎತ್ತರದ ಕರುಣಾನಿಧಿಯ ಕಂಚಿನ ಪ್ರತಿಮೆ ಅನಾವರಣ

ಉಪ ರಾಷ್ಟ್ರಪತಿ ವೆಂಕಯ್ಯನಾಯ್ಡು ಸೇರಿದಂತೆ ಇತರರಿಂದ ಪುಷ್ಪನಮನ
Last Updated 28 ಮೇ 2022, 16:19 IST
ಅಕ್ಷರ ಗಾತ್ರ

ಚೆನ್ನೈ:ತಮಿಳುನಾಡಿನಲ್ಲಿ ಐದು ಬಾರಿ ಮುಖ್ಯಮಂತ್ರಿಯಾಗಿದ್ದ ದಿವಂಗತ ಎಂ.ಕರುಣಾನಿಧಿ ಅವರ 16 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು ಶನಿವಾರ ಇಲ್ಲಿ ಅನಾವರಣಗೊಳಿಸಿದರು.

ನಗರದ ಒಮಂದುರಾರ್ ಎಸ್ಟೇಟ್‌ನಲ್ಲಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಆವರಣದಲ್ಲಿ ಈ ಪ್ರತಿಮೆ ನಿರ್ಮಿಸಲಾಗಿದೆ. 35 ವರ್ಷಗಳ ಹಿಂದೆ ಎಐಎಡಿಎಂಕೆಯ ಸಂಸ್ಥಾಪಕ ಎಂ.ಜಿ. ರಾಮಚಂದ್ರನ್ ಅವರ ಸಾವಿನ ಬಳಿಕ ಕರುಣಾನಿಧಿ ಅವರ ಪ್ರತಿಮೆಯನ್ನು ಧ್ವಂಸಗೊಳಿಸಲಾಗಿತ್ತು. ಅಂದು ಪ್ರತಿಮೆ ಇದ್ದ ಸ್ಥಳದಿಂದ 100 ಮೀಟರ್ ದೂರದಲ್ಲಿ ಈ ಪ್ರತಿಮೆ ಸ್ಥಾಪಿಸಲಾಗಿದೆ.

ರಾಷ್ಟ್ರೀಯ ನಾಯಕ ಪೆರಿಯಾರ್ ಅವರೇ ಕರುಣಾನಿಧಿ ಅವರ ಪ್ರತಿಮೆ ಸ್ಥಾಪನೆಗೆ ಮುಂದಾಗಿದ್ದರು. ಆದರೆ, ಪೆರಿಯಾರ್ ಅವರ ಸಾವಿನ ಬಳಿಕ ಅವರ ಪತ್ನಿ ಅವರು ಕರುಣಾನಿಧಿ ಅವರ ಪ್ರತಿಮೆ ಸ್ಥಾಪಸಿದ್ದರು. ಆದರೆ ಈ ಪ್ರತಿಮೆಯನ್ನು ಎಂ.ಜಿ.ಆರ್ ಅವರ ಸಾವು ಸಂಭವಿಸಿದ್ದಾಗ ರಾಜಕೀಯ ಕಾರಣಗಳಿಗಾಗಿ ಕೆಲ ದುಷ್ಟ ಶಕ್ತಿಗಳು ಕೆಡವಿ ಹಾಕಿದ್ದವು ಎಂದು ಸ್ಟಾಲಿನ್ ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT