<p><strong>ಲಖನೌ: </strong>ಉತ್ತರ ಪ್ರದೇಶದ ಲಖಿಂಪುರ–ಖೇರಿಯಲ್ಲಿ ಘೋಷಣೆ ಕೂಗುತ್ತ ಪ್ರತಿಭಟನೆ ನಡೆಸುತ್ತಿದ್ದ ರೈತರು, ಹಿಂದಿನಿಂದ ಬಂದ ಫೋರ್ವೀಲ್ ವಾಹನ (ಮಹೀಂದ್ರಾ ಥಾರ್ನಂತೆ ಕಾಣುವ ವಾಹನ) ರೈತರನ್ನು ಲೆಕ್ಕಿಸದೆ ಅಡ್ಡಸಿಕ್ಕವರನ್ನು ಗುದ್ದುತ್ತ ಮುನ್ನುಗ್ಗುತ್ತದೆ.... ಅಲ್ಲಿ ನಾಲ್ಕು ಮಂದಿ ಪ್ರತಿಭಟನಾ ನಿರತರು ಸಾವಿಗೀಡಾಗುತ್ತಾರೆ.</p>.<p>ಲಖಿಂಪುರ–ಖೇರಿಯ ದುರ್ಘಟನೆಯ ವಿಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. 27 ಸೆಕೆಂಡ್ಗಳ ಈ ವಿಡಿಯೊದಲ್ಲಿ ಅಮಾನವೀಯ ಘಟನೆಯ ಅನಾವರಣವಾಗಿದೆ. ಫೋರ್ವೀಲ್ ವಾಹನ ಹಿಂದಿನಿಂದ ಗುದ್ದುತಿದ್ದಂತೆ ರೈತರು ಚೆಲ್ಲಾಪಿಲ್ಲಿಯಾಗಿ ಹಾದಿಯಲ್ಲಿ ಬೀಳುತ್ತಾರೆ. ರೈತರೊಬ್ಬರು ವಾಹನದ ಬಾನೆಟ್ ಮೇಲೆ ಬಿದ್ದು, ಅಲ್ಲಿಂದ ರಸ್ತೆಗೆ ಬೀಳುತ್ತಾರೆ. ಅದರ ಹಿಂದೆಯೇ ಮತ್ತೊಂದು ಎಸ್ಯುವಿ ಸೈರನ್ ಮಾಡುತ್ತ, ಬಿದ್ದ ರೈತರನ್ನು ಗಮನಿಸದೆಯೇ ಸಾಗುತ್ತದೆ.</p>.<p>ಕಾಂಗ್ರೆಸ್ ಟ್ವಿಟರ್ ಖಾತೆಯಲ್ಲೂ ಈ ವಿಡಿಯೊ ಹಂಚಿಕೊಳ್ಳಲಾಗಿದೆ. ಇದು ಲಖಿಂಪುರ–ಖೇರಿಯ ಘಟನೆಯೇ ಅಥವಾ ಇಲ್ಲವೇ ಎಂಬುದನ್ನು ಪೊಲೀಸರು ಇನ್ನಷ್ಟೇ ಪರಿಶೀಲಿಸಬೇಕಿದೆ. ವಿಡಿಯೊ ಗುಣಮಟ್ಟ ಕಡಿಮೆ ಇರುವುದರಿಂದ ವಾಹನವನ್ನು ಯಾರು ಚಲಾಯಿಸುತ್ತಿದ್ದರು ಎಂಬುದು ಸ್ಪಷ್ಟವಾಗಿ ಕಾಣುವುದಿಲ್ಲ.</p>.<p>ಕೇಂದ್ರ ಸಚಿವ ಅಜಯ್ ಮಿಶ್ರಾ ಮತ್ತು ಉತ್ತರ ಪ್ರದೇಶ ಉಪಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಅವರನ್ನು ತಡೆಯಲು ನೂರಾರು ರೈತರು ಭಾನುವಾರ ಯತ್ನಿಸಿದ್ದರು. ಈ ಗುಂಪಿನ ಮೇಲೆ ಮಿಶ್ರಾ ಅವರಿಗೆ ಸಂಬಂಧಿಸಿದ ಎಸ್ಯುವಿ ಹರಿದು ನಾಲ್ವರು ರೈತರು ಮೃತಪಟ್ಟರು. ನಂತರ ನಡೆದ ಹಿಂಸಾಚಾರಕ್ಕೆ ನಾಲ್ವರು ಬಲಿಯಾದರು. ರೈತರ ಮೇಲೆ ಹರಿದ ಕಾರನ್ನು ಅಜಯ್ ಮಿಶ್ರಾ ಮಗ ಆಶಿಶ್ ಮಿಶ್ರಾ ಚಾಲನೆ ಮಾಡಿದ್ದರು ಎಂದು ರೈತರು ಆರೋಪಿಸಿದ್ದಾರೆ.</p>.<p><strong>ಇದನ್ನೂ ಓದಿ:</strong> <a href="https://www.prajavani.net/india-news/lakhimpur-kheri-violence-uttar-pradesh-congress-bjp-aap-narendra-modi-872756.html" target="_blank">ಲಖಿಂಪುರ–ಖೇರಿ ಹಿಂಸೆ: ಸಚಿವರ ತಲೆದಂಡ, ಮಗನ ಸೆರೆಗೆ ಒತ್ತಡ</a></p>.<p>ಉತ್ತರ ಪ್ರದೇಶದ ಲಖಿಂಪುರ–ಖೇರಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರು ಮತ್ತು ಸರ್ಕಾರದ ನಡುವೆ ಸೋಮವಾರ ಒಪ್ಪಂದ ಏರ್ಪಟ್ಟಿದೆ. ಮೃತರ ಕುಟುಂಬಕ್ಕೆ ತಲಾ ₹45 ಲಕ್ಷ ಮತ್ತು ಗಾಯಗೊಂಡವರಿಗೆ ತಲಾ ₹10 ಲಕ್ಷ ಪರಿಹಾರ ನೀಡಲು ಸರ್ಕಾರ ಒಪ್ಪಿದೆ. ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಮಗ, ರೈತರ ಮೇಲೆ ಎಸ್ಯುವಿ ಹರಿಸಿದ ಆರೋಪ ಹೊತ್ತಿರುವ ಆಶಿಶ್ ಮಿಶ್ರಾ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ.</p>.<p>ಮೃತ ರೈತರ ಅಂತ್ಯ ಸಂಸ್ಕಾರಕ್ಕೆ ರೈತ ನಾಯಕರು ಒಪ್ಪಿದ್ದಾರೆ, ಜತೆಗೆ ಅವರು ಪ್ರತಿಭಟನೆಯನ್ನೂ ಕೊನೆಗೊಳಿಸಲಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್ ಕುಮಾರ್ ಅವರು ಲಖಿಂಪುರ–ಖೇರಿಯಲ್ಲಿ ಸೋಮವಾರ ಪ್ರಕಟಿಸಿದ್ದಾರೆ.</p>.<p>ನಾಲ್ವರು ರೈತರು ಸೇರಿ ಎಂಟು ಮಂದಿಯ ಸಾವಿಗೆ ಕಾರಣವಾದ ಪ್ರಕರಣದ ಬಗ್ಗೆ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಸರ್ಕಾರ ಆದೇಶಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ: </strong>ಉತ್ತರ ಪ್ರದೇಶದ ಲಖಿಂಪುರ–ಖೇರಿಯಲ್ಲಿ ಘೋಷಣೆ ಕೂಗುತ್ತ ಪ್ರತಿಭಟನೆ ನಡೆಸುತ್ತಿದ್ದ ರೈತರು, ಹಿಂದಿನಿಂದ ಬಂದ ಫೋರ್ವೀಲ್ ವಾಹನ (ಮಹೀಂದ್ರಾ ಥಾರ್ನಂತೆ ಕಾಣುವ ವಾಹನ) ರೈತರನ್ನು ಲೆಕ್ಕಿಸದೆ ಅಡ್ಡಸಿಕ್ಕವರನ್ನು ಗುದ್ದುತ್ತ ಮುನ್ನುಗ್ಗುತ್ತದೆ.... ಅಲ್ಲಿ ನಾಲ್ಕು ಮಂದಿ ಪ್ರತಿಭಟನಾ ನಿರತರು ಸಾವಿಗೀಡಾಗುತ್ತಾರೆ.</p>.<p>ಲಖಿಂಪುರ–ಖೇರಿಯ ದುರ್ಘಟನೆಯ ವಿಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. 27 ಸೆಕೆಂಡ್ಗಳ ಈ ವಿಡಿಯೊದಲ್ಲಿ ಅಮಾನವೀಯ ಘಟನೆಯ ಅನಾವರಣವಾಗಿದೆ. ಫೋರ್ವೀಲ್ ವಾಹನ ಹಿಂದಿನಿಂದ ಗುದ್ದುತಿದ್ದಂತೆ ರೈತರು ಚೆಲ್ಲಾಪಿಲ್ಲಿಯಾಗಿ ಹಾದಿಯಲ್ಲಿ ಬೀಳುತ್ತಾರೆ. ರೈತರೊಬ್ಬರು ವಾಹನದ ಬಾನೆಟ್ ಮೇಲೆ ಬಿದ್ದು, ಅಲ್ಲಿಂದ ರಸ್ತೆಗೆ ಬೀಳುತ್ತಾರೆ. ಅದರ ಹಿಂದೆಯೇ ಮತ್ತೊಂದು ಎಸ್ಯುವಿ ಸೈರನ್ ಮಾಡುತ್ತ, ಬಿದ್ದ ರೈತರನ್ನು ಗಮನಿಸದೆಯೇ ಸಾಗುತ್ತದೆ.</p>.<p>ಕಾಂಗ್ರೆಸ್ ಟ್ವಿಟರ್ ಖಾತೆಯಲ್ಲೂ ಈ ವಿಡಿಯೊ ಹಂಚಿಕೊಳ್ಳಲಾಗಿದೆ. ಇದು ಲಖಿಂಪುರ–ಖೇರಿಯ ಘಟನೆಯೇ ಅಥವಾ ಇಲ್ಲವೇ ಎಂಬುದನ್ನು ಪೊಲೀಸರು ಇನ್ನಷ್ಟೇ ಪರಿಶೀಲಿಸಬೇಕಿದೆ. ವಿಡಿಯೊ ಗುಣಮಟ್ಟ ಕಡಿಮೆ ಇರುವುದರಿಂದ ವಾಹನವನ್ನು ಯಾರು ಚಲಾಯಿಸುತ್ತಿದ್ದರು ಎಂಬುದು ಸ್ಪಷ್ಟವಾಗಿ ಕಾಣುವುದಿಲ್ಲ.</p>.<p>ಕೇಂದ್ರ ಸಚಿವ ಅಜಯ್ ಮಿಶ್ರಾ ಮತ್ತು ಉತ್ತರ ಪ್ರದೇಶ ಉಪಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಅವರನ್ನು ತಡೆಯಲು ನೂರಾರು ರೈತರು ಭಾನುವಾರ ಯತ್ನಿಸಿದ್ದರು. ಈ ಗುಂಪಿನ ಮೇಲೆ ಮಿಶ್ರಾ ಅವರಿಗೆ ಸಂಬಂಧಿಸಿದ ಎಸ್ಯುವಿ ಹರಿದು ನಾಲ್ವರು ರೈತರು ಮೃತಪಟ್ಟರು. ನಂತರ ನಡೆದ ಹಿಂಸಾಚಾರಕ್ಕೆ ನಾಲ್ವರು ಬಲಿಯಾದರು. ರೈತರ ಮೇಲೆ ಹರಿದ ಕಾರನ್ನು ಅಜಯ್ ಮಿಶ್ರಾ ಮಗ ಆಶಿಶ್ ಮಿಶ್ರಾ ಚಾಲನೆ ಮಾಡಿದ್ದರು ಎಂದು ರೈತರು ಆರೋಪಿಸಿದ್ದಾರೆ.</p>.<p><strong>ಇದನ್ನೂ ಓದಿ:</strong> <a href="https://www.prajavani.net/india-news/lakhimpur-kheri-violence-uttar-pradesh-congress-bjp-aap-narendra-modi-872756.html" target="_blank">ಲಖಿಂಪುರ–ಖೇರಿ ಹಿಂಸೆ: ಸಚಿವರ ತಲೆದಂಡ, ಮಗನ ಸೆರೆಗೆ ಒತ್ತಡ</a></p>.<p>ಉತ್ತರ ಪ್ರದೇಶದ ಲಖಿಂಪುರ–ಖೇರಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರು ಮತ್ತು ಸರ್ಕಾರದ ನಡುವೆ ಸೋಮವಾರ ಒಪ್ಪಂದ ಏರ್ಪಟ್ಟಿದೆ. ಮೃತರ ಕುಟುಂಬಕ್ಕೆ ತಲಾ ₹45 ಲಕ್ಷ ಮತ್ತು ಗಾಯಗೊಂಡವರಿಗೆ ತಲಾ ₹10 ಲಕ್ಷ ಪರಿಹಾರ ನೀಡಲು ಸರ್ಕಾರ ಒಪ್ಪಿದೆ. ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಮಗ, ರೈತರ ಮೇಲೆ ಎಸ್ಯುವಿ ಹರಿಸಿದ ಆರೋಪ ಹೊತ್ತಿರುವ ಆಶಿಶ್ ಮಿಶ್ರಾ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ.</p>.<p>ಮೃತ ರೈತರ ಅಂತ್ಯ ಸಂಸ್ಕಾರಕ್ಕೆ ರೈತ ನಾಯಕರು ಒಪ್ಪಿದ್ದಾರೆ, ಜತೆಗೆ ಅವರು ಪ್ರತಿಭಟನೆಯನ್ನೂ ಕೊನೆಗೊಳಿಸಲಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್ ಕುಮಾರ್ ಅವರು ಲಖಿಂಪುರ–ಖೇರಿಯಲ್ಲಿ ಸೋಮವಾರ ಪ್ರಕಟಿಸಿದ್ದಾರೆ.</p>.<p>ನಾಲ್ವರು ರೈತರು ಸೇರಿ ಎಂಟು ಮಂದಿಯ ಸಾವಿಗೆ ಕಾರಣವಾದ ಪ್ರಕರಣದ ಬಗ್ಗೆ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಸರ್ಕಾರ ಆದೇಶಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>