ಉತ್ತರ ಪ್ರದೇಶದ ಕೈಸರ್ ಗಂಜ್ ಕ್ಷೇತ್ರವನ್ನು ಪ್ರತಿನಿಧಿಸುವ ಸಿಂಗ್, ರಾಂಚಿಯ ಶಾಹೀದ್ ಗಣಪತ್ ರಾಯ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 15 ವರ್ಷದೊಳಗಿನವರ ರಾಷ್ಟ್ರೀಯ ಕುಸ್ತಿ ಚಾಂಪಿಯನ್ಷಿಪ್ನ ಮೊದಲ ದಿನದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಕುಸ್ತಿಪಟು ಒಬ್ಬರ ವಯಸ್ಸು 15 ವರ್ಷ ಮೇಲ್ಪಟ್ಟಿದ್ದರಿಂದ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶ ನೀಡಿರಲಿಲ್ಲ. ಆದರೂ ಆತ ತನಗೆ ಭಾಗವಹಿಸಲು ಅವಕಾಶ ನೀಡುವಂತೆ ಸಂಸದರಿಗೆ ದುಂಬಾಲು ಬಿದ್ದಿದ್ದನು. ಈ ಸಂದರ್ಭ, ತಾಳ್ಮೆ ಕಳೆದುಕೊಂಡ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು, ಕುಸ್ತಿಪಟುವಿನ ಕಪಾಳಕ್ಕೆ ಬಾರಿಸಿದ್ಧಾರೆ ಎಂದು ಎನ್ಡಿಟಿವಿ ವರದಿ ಮಾಡಿದೆ.