<p><strong>ಮುಂಬೈ: </strong>ದೆಹಲಿಯಲ್ಲಿ ಗಣರಾಜ್ಯೋತ್ಸವ ದಿನದಂದು ನಡೆದ ರೈತರ ಟ್ರ್ಯಾಕ್ಟರ್ ರ್ಯಾಲಿ ವೇಳೆ ತ್ರಿವರ್ಣ ಧ್ವಜಕ್ಕೆ ಅವಮಾನವಾಗುವಂತಹ ಘಟನೆ ನಡೆದಿಲ್ಲ. ಕೆಂಪುಕೋಟೆಯಲ್ಲಿ ಅಂದು ನಡೆದ ಘಟನೆಗಳ ಸೆರೆಹಿಡಿದಿರುವ ವಿಡಿಯೊದಲ್ಲಿ ಇಂತಹ ಯಾವುದೇ ದೃಶ್ಯ ಇಲ್ಲ ಎಂದು ಶಿವಸೇನಾ ಹೇಳಿದೆ.</p>.<p>‘ನಡೆಯದ ಘಟನೆಯನ್ನು ವರ್ಣಿಸುವುದು, ಆ ವಿಷಯದ ಕುರಿತಾಗಿ ಹುಯಿಲೆಬ್ಬಿಸುವುದು ಕೂಡ ಒಂದು ರೀತಿಯಲ್ಲಿ ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡಿದ ಹಾಗೆ’ ಎಂದು ಶಿವಸೇನಾ ಪಕ್ಷದ ಮುಖವಾಣಿಯಾಗಿರುವ ʼಸಾಮ್ನಾʼ ಪತ್ರಿಕೆಯ ಸಂಪಾದಕೀಯದಲ್ಲಿ ಹೇಳಲಾಗಿದೆ.</p>.<p>‘ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೊಗಳಲ್ಲಿ ತ್ರಿವರ್ಣ ಧ್ವಜಕ್ಕೆ ಅವಮಾನವಾಗುವಂತಹ ಯಾವುದೇ ದೃಶ್ಯಾವಳಿ ಇರಲಿಲ್ಲ. ಈಗಲೂ ಕೆಂಪುಕೋಟೆಯಲ್ಲಿ ರಾಷ್ಟ್ರ ಧ್ವಜ ಹೆಮ್ಮೆಯಿಂದ ಹಾರುತ್ತಿದೆ. ರಾಷ್ಟ್ರಧ್ವಜದ ಗೌರವ, ದೇಶದ ಗೌರವ’ ಎಂದು ಸಂಪಾದಕೀಯದಲ್ಲಿ ಬರೆಯಲಾಗಿದೆ.</p>.<p>‘ಜನವರಿ 26 ರ ಹಿಂಸಾಚಾರವನ್ನು ರಾಜಕೀಯವಾಗಿ ಬಳಸುತ್ತಿರುವುದು ಸರಿಯೇ? ನಡೆಯದ ಘಟನೆ ಬಗ್ಗೆ ಪ್ರಧಾನಿ ಮೋದಿ ಅವರು ಯಾಕೆ ನೊಂದುಕೊಳ್ಳಬೇಕು? ಆಡಳಿತ ಪಕ್ಷವಾದ ಬಿಜೆಪಿ ಆ ವಿಷಯದ ಬಗ್ಗೆ ಯಾಕೆ ಹುಯಿಲೆಬ್ಬಿಸಬೇಕು?’ ಎಂದು ಸಂಪಾದಕೀಯದಲ್ಲಿ ಪ್ರಶ್ನಿಸಲಾಗಿದೆ.</p>.<p>ಗಣರಾಜ್ಯೋತ್ಸವ ದಿನದಂದು ನಡೆದ ಹಿಂಸಾಚಾರದ ಬಗ್ಗೆಭಾನುವಾರ ಮೋದಿ ಅವರು, ‘ಗಣರಾಜ್ಯೋತ್ಸವ ದಿನದಂದು ತ್ರಿವರ್ಣ ಧ್ವಜಕ್ಕೆ ಅವಮಾನ ಮಾಡಲಾಗಿದೆ. ಇದು ದೇಶದ ಜನರಿಗೆ ಬಹಳ ನೋವನ್ನು ನೀಡಿದೆ’ ಎಂದು ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ: </strong>ದೆಹಲಿಯಲ್ಲಿ ಗಣರಾಜ್ಯೋತ್ಸವ ದಿನದಂದು ನಡೆದ ರೈತರ ಟ್ರ್ಯಾಕ್ಟರ್ ರ್ಯಾಲಿ ವೇಳೆ ತ್ರಿವರ್ಣ ಧ್ವಜಕ್ಕೆ ಅವಮಾನವಾಗುವಂತಹ ಘಟನೆ ನಡೆದಿಲ್ಲ. ಕೆಂಪುಕೋಟೆಯಲ್ಲಿ ಅಂದು ನಡೆದ ಘಟನೆಗಳ ಸೆರೆಹಿಡಿದಿರುವ ವಿಡಿಯೊದಲ್ಲಿ ಇಂತಹ ಯಾವುದೇ ದೃಶ್ಯ ಇಲ್ಲ ಎಂದು ಶಿವಸೇನಾ ಹೇಳಿದೆ.</p>.<p>‘ನಡೆಯದ ಘಟನೆಯನ್ನು ವರ್ಣಿಸುವುದು, ಆ ವಿಷಯದ ಕುರಿತಾಗಿ ಹುಯಿಲೆಬ್ಬಿಸುವುದು ಕೂಡ ಒಂದು ರೀತಿಯಲ್ಲಿ ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡಿದ ಹಾಗೆ’ ಎಂದು ಶಿವಸೇನಾ ಪಕ್ಷದ ಮುಖವಾಣಿಯಾಗಿರುವ ʼಸಾಮ್ನಾʼ ಪತ್ರಿಕೆಯ ಸಂಪಾದಕೀಯದಲ್ಲಿ ಹೇಳಲಾಗಿದೆ.</p>.<p>‘ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೊಗಳಲ್ಲಿ ತ್ರಿವರ್ಣ ಧ್ವಜಕ್ಕೆ ಅವಮಾನವಾಗುವಂತಹ ಯಾವುದೇ ದೃಶ್ಯಾವಳಿ ಇರಲಿಲ್ಲ. ಈಗಲೂ ಕೆಂಪುಕೋಟೆಯಲ್ಲಿ ರಾಷ್ಟ್ರ ಧ್ವಜ ಹೆಮ್ಮೆಯಿಂದ ಹಾರುತ್ತಿದೆ. ರಾಷ್ಟ್ರಧ್ವಜದ ಗೌರವ, ದೇಶದ ಗೌರವ’ ಎಂದು ಸಂಪಾದಕೀಯದಲ್ಲಿ ಬರೆಯಲಾಗಿದೆ.</p>.<p>‘ಜನವರಿ 26 ರ ಹಿಂಸಾಚಾರವನ್ನು ರಾಜಕೀಯವಾಗಿ ಬಳಸುತ್ತಿರುವುದು ಸರಿಯೇ? ನಡೆಯದ ಘಟನೆ ಬಗ್ಗೆ ಪ್ರಧಾನಿ ಮೋದಿ ಅವರು ಯಾಕೆ ನೊಂದುಕೊಳ್ಳಬೇಕು? ಆಡಳಿತ ಪಕ್ಷವಾದ ಬಿಜೆಪಿ ಆ ವಿಷಯದ ಬಗ್ಗೆ ಯಾಕೆ ಹುಯಿಲೆಬ್ಬಿಸಬೇಕು?’ ಎಂದು ಸಂಪಾದಕೀಯದಲ್ಲಿ ಪ್ರಶ್ನಿಸಲಾಗಿದೆ.</p>.<p>ಗಣರಾಜ್ಯೋತ್ಸವ ದಿನದಂದು ನಡೆದ ಹಿಂಸಾಚಾರದ ಬಗ್ಗೆಭಾನುವಾರ ಮೋದಿ ಅವರು, ‘ಗಣರಾಜ್ಯೋತ್ಸವ ದಿನದಂದು ತ್ರಿವರ್ಣ ಧ್ವಜಕ್ಕೆ ಅವಮಾನ ಮಾಡಲಾಗಿದೆ. ಇದು ದೇಶದ ಜನರಿಗೆ ಬಹಳ ನೋವನ್ನು ನೀಡಿದೆ’ ಎಂದು ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>