ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಪ್ರದೇಶದಲ್ಲಿ ಪ್ರಚಾರಕ್ಕೆ ಬಂದ ಬಿಜೆಪಿ ಶಾಸಕರನ್ನು ಓಡಿಸಿದ ಗ್ರಾಮಸ್ಥರು

Last Updated 21 ಜನವರಿ 2022, 1:44 IST
ಅಕ್ಷರ ಗಾತ್ರ

ಲಖನೌ: ವಿಧಾನಸಭಾ ಚುನಾವಣೆಗೆ ಸಜ್ಜಾದ ಉತ್ತರ ಪ್ರದೇಶದಲ್ಲಿ ಪ್ರಚಾರ ಕಾರ್ಯಕ್ಕೆ ತೆರಳಿದ್ದ ಬಿಜೆಪಿ ಶಾಸಕರೊಬ್ಬರನ್ನು ಗ್ರಾಮಸ್ಥರು ಬೆನ್ನಟ್ಟಿದ್ದಾರೆ.

ಶಾಸಕ ವಿಕ್ರಮ್ ಸೈನಿ ಅವರು ಮುನ್ವಾರ್‌ಪುರ್ ಗ್ರಾಮಕ್ಕೆ ತೆರಳಿದ್ದರು. ಆ ಸಂದರ್ಭದಲ್ಲಿ ಉದ್ರಿಕ್ತ ಗ್ರಾಮಸ್ಥರು ಶಾಸಕರನ್ನು ತಡೆದು ವಾಪಸ್ ಹೋಗುವಂತೆ ಹೇಳಿದ್ದಾರೆ.

ಗ್ರಾಮಸ್ಥರ ಪ್ರತಿರೋಧ ಎದುರಿಸಿದ ಶಾಸಕರು, ಬೇರೆ ಆಯ್ಕೆಯಿಲ್ಲದೇ ಕಾರು ಹತ್ತಿ ವಾಪಸ್ ಹೋಗಿದ್ದಾರೆ.

ಈ ಕುರಿತ ವಿಡಿಯೊವನ್ನು ಕಿಸಾನ್ ಏಕತಾ ಮಂಚ್ ಟ್ವೀಟ್ ಮಾಡಿದ್ದು, ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ.

ಈ ಬಗ್ಗೆ ಸುದ್ದಿಗಾರರ ಜತೆ ಮಾತನಾಡಿರುವ ಶಾಸಕ ಸೈನಿ, ಗ್ರಾಮಸ್ಥರ ಪೈಕಿ ಕೆಲವರು ಮದ್ಯದ ಅಮಲಿನಲ್ಲಿದ್ದರು. ಹೀಗಾಗಿ ಭೇಟಿಗೆ ಪ್ರತಿರೋಧ ವ್ಯಕ್ತಪಡಿಸಿದ್ದರು. ಆದ್ದರಿಂದ ವಾಪಸ್ ಬಂದಿರುವುದಾಗಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT