ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ನಾಯಕರಿಗೆ ಪ್ರವೇಶವಿಲ್ಲ: ಉತ್ತರ ಪ್ರದೇಶದ ಗ್ರಾಮದಲ್ಲಿ ಬೋರ್ಡ್

Last Updated 24 ಜನವರಿ 2022, 11:20 IST
ಅಕ್ಷರ ಗಾತ್ರ

ಲಖನೌ: ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿನ ಗ್ರಾಮವೊಂದಕ್ಕೆ ಬಿಜೆಪಿ ನಾಯಕರಿಗೆ ಪ್ರವೇಶವಿಲ್ಲ ಎಂಬ ಬೋರ್ಡ್ ಹಾಕಲಾಗಿದೆ.

ಲಯನ್ ಗ್ರಾಮದ ಅಲ್ಲಲ್ಲಿ ಬೋರ್ಡ್‌ಗಳನ್ನು ಸ್ಥಳೀಯರು ಅಳವಡಿಸಿದ್ದು, ಬಿಜೆಪಿ ನಾಯಕರಿಗೆ ಪ್ರವೇಶವಿಲ್ಲ. ಆದರೆ ರಾಷ್ಟ್ರೀಯ ಲೋಕ ದಳದ ನಾಯಕರು ಬರಬಹುದು, ನಿಮಗೆ ಸ್ವಾಗತ ಎಂದು ಬರೆಯಲಾಗಿದೆ.

ಸ್ಥಳೀಯ ಬಿಜೆಪಿ ಶಾಸಕ ತೇಜಿಂದರ್ ನರ್ವಾಲ್ ಕುರಿತು ಗ್ರಾಮಸ್ಥರು ತೀವ್ರ ಆಕ್ರೋಶ ಹೊಂದಿದ್ದಾರೆ.

ಚುನಾವಣೆಯಲ್ಲಿ ಜಯಗಳಿಸಿದ ಬಳಿಕ ಶಾಸಕರು ಒಮ್ಮೆಯೂ ಇತ್ತ ಸುಳಿದಿಲ್ಲ. ರೈತರ ಪ್ರತಿಭಟನೆ ಸಂದರ್ಭದಲ್ಲೂ ಬಂದಿಲ್ಲ. ಐದು ವರ್ಷಕ್ಕೊಮ್ಮೆ, ಚುನಾವಣೆಗೆ ಮಾತ್ರ ಭೇಟಿ ನೀಡುವ ಶಾಸಕರು, ಜನಪ್ರತಿನಿಧಿಗಳು ಯಾಕಾಗಿ ಬೇಕು ಎಂದು ಸ್ಥಳೀಯ ರೈತ ರಾಧೇ ಶ್ಯಾಮ್ ತ್ಯಾಗಿ ಪ್ರಶ್ನಿಸಿದ್ದಾರೆ.

ಆರ್‌ಎಲ್‌ಡಿ ಪಕ್ಷದ ನಾಯಕರು ಗ್ರಾಮಕ್ಕೆ ಆಗಾಗ ಭೇಟಿ ನೀಡುತ್ತಾರೆ. ಜನರೊಡನೆ ಸಮಯ ಕಳೆಯುತ್ತಾರೆ. ಹೀಗಾಗಿ ಅವರಿಗೆ ಮಾತ್ರ ಪ್ರವೇಶ ನೀಡುತ್ತೇವೆ ಎಂದು ಸ್ಥಳೀಯರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT