ರಾಜ್ಯ ಸರ್ಕಾರ ಸಲ್ಲಿಸಿರುವ ಈ ಮಾಹಿತಿಯ ಹಿನ್ನೆಲೆಯಲ್ಲಿ ಹೈಕೋರ್ಟ್ ಈ ಪ್ರಕರಣದ ಅರ್ಜಿಯನ್ನು ಹಾಗೆ ಉಳಿಸಿಕೊಳ್ಳುವುದಿಲ್ಲ‘ ಎಂದು ಹೇಳಿದೆ. ‘ಈ ಪ್ರಕರಣದಲ್ಲಿನ ಸತ್ಯಾಸತ್ಯತೆ ಮತ್ತು ಸನ್ನಿವೇಶಗಳನ್ನು ಗಮನಿಸುವ ಜೊತೆಗೆ, ಎಲ್ಲಾ ಅಧಿಕಾರಿಗಳು ಸುಪ್ರೀಂ ಕೋರ್ಟ್ ಮತ್ತು ಈ ನ್ಯಾಯಾಲಯದ ನಿರ್ದೇಶನವನ್ನು ಅನುಷ್ಠಾನಗೊಳಿಸಬೇಕು. ನ್ಯಾಯಾಲಯ ಹೇಳಿರುವಂತೆ ಭವಿಷ್ಯದಲ್ಲಿ ಇಂಥ ಯಾವುದೇ ದೂರು ಬರದಂತೆ, ನ್ಯಾಯಾಲಯದ ಆದೇಶ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು. ಒಂದೊಮ್ಮೆ ಆದೇಶ ಉಲ್ಲಂಘನೆಯಾದರೆ, ಅದನ್ನು ಗಂಭೀರವಾಗಿ ಪರಿಗಣಿಸಲಾಗುತ್ತದೆ‘ ಎಂದು ನ್ಯಾಯಪೀಠ ಹೇಳಿದೆ.