ಜುಲೈ 12ರ ವರೆಗೂ ಕಾರ್ತಿ ಚಿದಂಬರಂ ಬಂಧಿಸಲ್ಲ: ಇ.ಡಿ

ನವದೆಹಲಿ: ವೀಸಾ ಹಗರಣ ಸಂಬಂಧ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ವಿರುದ್ಧ ಜುಲೈ 12ರವರೆಗೆ ಯಾವುದೇ ರೀತಿಯ ಬಲವಂತದ ಕ್ರಮ ಕೈಗೊಳ್ಳುವುದಿಲ್ಲ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ದೆಹಲಿ ಹೈಕೋರ್ಟ್ಗೆ ಶುಕ್ರವಾರ ಮೌಖಿಕವಾಗಿ ತಿಳಿಸಿದೆ.
ಪ್ರಕರಣದ ನಿರೀಕ್ಷಣಾ ಜಾಮೀನು ಕುರಿತ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಸ್ಮೀತ್ ಸಿಂಗ್ ಅವರು ಜುಲೈ 12ಕ್ಕೆ ವಿಚಾರಣೆಯನ್ನು ಮುಂದೂಡಿದರು.
ಇದನ್ನೂ ಓದಿ–ವಯನಾಡ್: ರಾಹುಲ್ ಗಾಂಧಿ ಕಚೇರಿಗೆ ನುಗ್ಗಿ ದಾಂಧಲೆ
ಕಾರ್ತಿ ಅವರು ತಮ್ಮ ತಂದೆ ಪಿ.ಚಿದಂಬರಂ ಗೃಹ ಸಚಿವರಾಗಿದ್ದ ಅವಧಿಯಲ್ಲಿ (2011) ಚೀನಾದ 263 ಪ್ರಜೆಗಳಿಗೆ ವೀಸಾ ಕೊಡಿಸಿದ್ದರು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕಾರ್ತಿ ಮತ್ತು ಇತರರ ವಿರುದ್ಧ ಜಾರಿ ನಿರ್ದೇಶನಾಲಯ ಇತ್ತೀಚೆಗೆ ಹಣ ಅಕ್ರಮ ಹಣ ವರ್ಗಾವಣೆ (ಪಿಎಂಎಲ್ಎ) ಪ್ರಕರಣ ದಾಖಲಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.