ವಿಶಾಖಪಟ್ಟಣ ಆಂಧ್ರಪ್ರದೇಶದ ನೂತನ ರಾಜಧಾನಿ: ಸಿಎಂ ಜಗನ್ ಮೋಹನ್ ರೆಡ್ಡಿ ಘೋಷಣೆ

ನವದೆಹಲಿ: ಮುಂದಿನ ದಿನಗಳಲ್ಲಿ ವಿಶಾಖಪಟ್ಟಣವು ಆಂಧ್ರ ಪ್ರದೇಶದ ರಾಜಧಾನಿಯಾಗಲಿದೆ ಎಂದು ರಾಜ್ಯದ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರು ಮಂಗಳವಾರ ಹೇಳಿದರು.
ವಿಶಾಖಪಟ್ಟಣದಲ್ಲಿ ಮಾರ್ಚ್ನಲ್ಲಿ ಆಯೋಜನೆ ಆಗಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮ್ಮೇಳದ ಪೂರ್ವಭಾವಿಯಾಗಿ ನಡೆದ ಸಭೆಯಲ್ಲಿ ಹೂಡಿಕೆದಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಮುಂದಿನ ದಿನಗಳಲ್ಲಿ ನಮ್ಮ ರಾಜಧಾನಿಯಾಗಲಿರುವ ವಿಶಾಖಪಟ್ಟಣಕ್ಕೆ ನಾನು ನಿಮ್ಮೆಲ್ಲರನ್ನು ಆಮಂತ್ರಿಸುತ್ತಿದ್ದೇನೆ. ಕೆಲ ತಿಂಗಳಲ್ಲಿ ನನ್ನ ಕಚೇರಿಯನ್ನೂ ವಿಶಾಖಪಟ್ಟಣಕ್ಕೆ ವರ್ಗಾಯಿಸುತ್ತಿದ್ದೇನೆ’ ಎಂದು ಹೇಳಿದರು.
ರಾಜ್ಯದ ಮೂರು ಪ್ರಮುಖ ನಗರಗಳಾದ ವಿಶಾಖಪಟ್ಟಣ, ಅಮರಾವತಿ ಮತ್ತು ಕರ್ನೂಲನ್ನು ರಾಜಧಾನಿಯನ್ನಾಗಿ ರೂಪಿಸುವುದಾಗಿ ಜಗನ್ ಅವರು ವಿಧಾನಸಭೆಯಲ್ಲಿ ಮಸೂದೆ ಮಂಡಿಸಿದ್ದರು. ಮೂರು ರಾಜಧಾನಿ ಪ್ರಸ್ತಾವನೆಯನ್ನು ತಳ್ಳಿಹಾಕಿದ್ದ ಆಂಧ್ರ ಪ್ರದೇಶ ಹೈಕೋರ್ಟ್, ಅಮರಾವತಿಯನ್ನು ಮಾತ್ರ ರಾಜ್ಯ ರಾಜಧಾನಿಯನ್ನಾಗಿ ರೂಪಿಸುವಂತೆ ನಿರ್ದೇಶನ ನೀಡಿತ್ತು. ಈ ನಿರ್ದೇಶನವನ್ನು ಆಂಧ್ರ ಪ್ರದೇಶ ಸರ್ಕಾರ ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಿತ್ತು.
#WATCH | "Here I am to invite you to Visakhapatnam which will be our capital in the days to come. I will also be shifting to Visakhapatnam in the months to come": Andhra Pradesh CM YS Jagan Mohan Reddy at International Diplomatic Alliance meet in Delhi pic.twitter.com/wANqgXC1yP
— ANI (@ANI) January 31, 2023
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.