ವಿಶ್ವವಿದ್ಯಾಲಯದ ಮೈದಾನದಲ್ಲಿ ಪ್ರತಿ ವರ್ಷವೂ ಚಳಿಗಾಲದ ಅವಧಿಯಲ್ಲಿ ಪೌಶ್ ಮೇಳ ಆಯೋಜಿಸಲಾಗುತ್ತದೆ. ಈ ಬಾರಿ ಮೇಳ ರದ್ದು ಮಾಡುವುದಾಗಿ ತಿಳಿಸಿದ್ದ ವಿಶ್ವವಿದ್ಯಾಲಯದ ಆಡಳಿತ ಮಂಡಳಿ, ಮೈದಾನದ ಸುತ್ತಲೂ ತಡೆಗೋಡೆ ನಿರ್ಮಿಸಲು ಮುಂದಾಗಿತ್ತು. ಇದರಿಂದ ಕೆರಳಿದ ಸುಮಾರು 4,000 ಮಂದಿಯನ್ನೊಳಗೊಂಡ ಸ್ಥಳೀಯರ ಗುಂಪು ಸೋಮವಾರ ವಿಶ್ವವಿದ್ಯಾಲಯದ ಆವರಣದೊಳಗೆ ನುಗ್ಗಿ ಗಲಭೆ ನಡೆಸಿತ್ತು. ‘ಪ್ರಧಾನಿ ಅವರು ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಪತಿಗಳಾಗಿದ್ದಾರೆ. ಹೀಗಾಗಿ ಅವರ ಮಧ್ಯ ಪ್ರವೇಶಕ್ಕೆ ಮನವಿ ಮಾಡಬೇಕೆಂದು ಕಾರ್ಯಕಾರಿ ಮಂಡಳಿ ಸಭೆಯಲ್ಲಿ ತೀರ್ಮಾನಿಸಲಾಗಿದೆ’ ಎಂದು ಸದಸ್ಯರೊಬ್ಬರು ಮಂಗಳವಾರ ಹೇಳಿದ್ದಾರೆ.