ನೆರೆಯ ದೇಶ ನೇಪಾಳದ ಲುಂಬಿನಿಯಲ್ಲಿ ನಡೆಯುವ ಬುದ್ಧ ಪೂರ್ಣಿಮೆಯಲ್ಲಿ ಪಾಲ್ಗೊಳ್ಳುವ ಒಂದು ದಿನದ ಮೊದಲು ಪ್ರಧಾನಿ ಮೋದಿ, ‘ನೇಪಾಳದ ಪ್ರಧಾನಿ ಶೇರ್ ಬಹದ್ದೂರ್ ದೇವುಬಾ ಕಳೆದ ತಿಂಗಳು ಭಾರತಕ್ಕೆ ಭೇಟಿ ನೀಡಿದಾಗ ನಡೆದ ಫಲಪ್ರದ ಮಾತುಕತೆಗಳ ನಂತರ ಅವರನ್ನು ಮತ್ತೊಮ್ಮೆ ಭೇಟಿಯಾಗಲು ಎದುರು ನೋಡುತ್ತಿದ್ದೇನೆ’ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.