<p><strong>ಕೊಲ್ಲಂ, ಕೇರಳ:</strong> ಆಯುರ್ವೇದ ವೈದ್ಯಕೀಯ ವಿದ್ಯಾರ್ಥಿನಿ ವಿಸ್ಮಯಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ ಎಸ್.ಕಿರಣ್ ಕುಮಾರ್ ವಿರುದ್ಧ ವರದಕ್ಷಿಣೆ ಕಿರುಕುಳ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಸಾಬೀತಾಗಿದ್ದು, ಆತನಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿ ಕೇರಳದ ನ್ಯಾಯಾಲಯ ಮಂಗಳವಾರ ಆದೇಶ ನೀಡಿದೆ.</p>.<p>ಕಳೆದ ವರ್ಷ ಜೂನ್ನಲ್ಲಿ ಪತಿಯ ಮನೆಯಲ್ಲಿ ವಿಸ್ಮಯಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.</p>.<p>ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ-1 ಸುಜಿತ್ ಕೆ.ಎನ್. ಅವರು ಭಾರತೀಯ ದಂಡ ಸಂಹಿತೆ (ಐಪಿಸಿ) ಮತ್ತು ವರದಕ್ಷಿಣೆ ನಿಷೇಧ ಕಾಯ್ದೆಯ ವಿವಿಧ ನಿಬಂಧನೆಗಳ ಅಡಿಯಲ್ಲಿ 10 ವರ್ಷ ಜೈಲು ಶಿಕ್ಷೆ ವಿಧಿಸಿದ್ದಾರೆ ಎಂದು ವಿಶೇಷ ಸರ್ಕಾರಿ ಅಭಿಯೋಜಕ (ಎಸ್ಪಿಪಿ) ಜಿ.ಮೋಹನರಾಜ್ ತಿಳಿಸಿದರು.</p>.<p>ಅಪರಾಧಿ ಕುಮಾರ್ಗೆ ಒಟ್ಟು ₹ 12,55,000 ದಂಡವನ್ನೂ ವಿಧಿಸಲಾಗಿದ್ದು, ಅದರಲ್ಲಿ ₹ 2 ಲಕ್ಷ ಸಂತ್ರಸ್ತೆಯ ಪೋಷಕರಿಗೆ ಪಾವತಿಸಲು ಸೂಚಿಸಲಾಗಿದೆ ಎಂದು ಅವರು ಹೇಳಿದರು.</p>.<p>‘ಅಪರಾಧಿಗೆ ಜೀವಾವಧಿ ಶಿಕ್ಷೆ ಸಿಗುತ್ತದೆ ಎಂದು ನಿರೀಕ್ಷಿಸಲಾಗಿತ್ತು. ಈ ಆದೇಶದಿಂದ ಸಂತೋಷವಾಗಿಲ್ಲ. ಶಿಕ್ಷೆಯ ಆದೇಶದ ವಿರುದ್ಧ ಕುಟುಂಬವು ಮೇಲ್ಮನವಿ ಸಲ್ಲಿಸಲಿದೆ. ಮಗಳಿಗೆ ನ್ಯಾಯ ಸಿಕ್ಕಿದೆ ಎಂದು ನಂಬುವುದಿಲ್ಲ. ವಿಸ್ಮಯಾಳ ಆತ್ಮಹತ್ಯೆಗೆ ಕಾರಣರಾದ ಇತರರ ವಿರುದ್ಧ ಕ್ರಮಕ್ಕಾಗಿ ಪ್ರಯತ್ನವನ್ನು ಮುಂದುವರಿಸಲಾಗುವುದು’ ಎಂದು ಸಂತ್ರಸ್ತೆಯ ತಾಯಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಲ್ಲಂ, ಕೇರಳ:</strong> ಆಯುರ್ವೇದ ವೈದ್ಯಕೀಯ ವಿದ್ಯಾರ್ಥಿನಿ ವಿಸ್ಮಯಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ ಎಸ್.ಕಿರಣ್ ಕುಮಾರ್ ವಿರುದ್ಧ ವರದಕ್ಷಿಣೆ ಕಿರುಕುಳ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಸಾಬೀತಾಗಿದ್ದು, ಆತನಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿ ಕೇರಳದ ನ್ಯಾಯಾಲಯ ಮಂಗಳವಾರ ಆದೇಶ ನೀಡಿದೆ.</p>.<p>ಕಳೆದ ವರ್ಷ ಜೂನ್ನಲ್ಲಿ ಪತಿಯ ಮನೆಯಲ್ಲಿ ವಿಸ್ಮಯಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.</p>.<p>ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ-1 ಸುಜಿತ್ ಕೆ.ಎನ್. ಅವರು ಭಾರತೀಯ ದಂಡ ಸಂಹಿತೆ (ಐಪಿಸಿ) ಮತ್ತು ವರದಕ್ಷಿಣೆ ನಿಷೇಧ ಕಾಯ್ದೆಯ ವಿವಿಧ ನಿಬಂಧನೆಗಳ ಅಡಿಯಲ್ಲಿ 10 ವರ್ಷ ಜೈಲು ಶಿಕ್ಷೆ ವಿಧಿಸಿದ್ದಾರೆ ಎಂದು ವಿಶೇಷ ಸರ್ಕಾರಿ ಅಭಿಯೋಜಕ (ಎಸ್ಪಿಪಿ) ಜಿ.ಮೋಹನರಾಜ್ ತಿಳಿಸಿದರು.</p>.<p>ಅಪರಾಧಿ ಕುಮಾರ್ಗೆ ಒಟ್ಟು ₹ 12,55,000 ದಂಡವನ್ನೂ ವಿಧಿಸಲಾಗಿದ್ದು, ಅದರಲ್ಲಿ ₹ 2 ಲಕ್ಷ ಸಂತ್ರಸ್ತೆಯ ಪೋಷಕರಿಗೆ ಪಾವತಿಸಲು ಸೂಚಿಸಲಾಗಿದೆ ಎಂದು ಅವರು ಹೇಳಿದರು.</p>.<p>‘ಅಪರಾಧಿಗೆ ಜೀವಾವಧಿ ಶಿಕ್ಷೆ ಸಿಗುತ್ತದೆ ಎಂದು ನಿರೀಕ್ಷಿಸಲಾಗಿತ್ತು. ಈ ಆದೇಶದಿಂದ ಸಂತೋಷವಾಗಿಲ್ಲ. ಶಿಕ್ಷೆಯ ಆದೇಶದ ವಿರುದ್ಧ ಕುಟುಂಬವು ಮೇಲ್ಮನವಿ ಸಲ್ಲಿಸಲಿದೆ. ಮಗಳಿಗೆ ನ್ಯಾಯ ಸಿಕ್ಕಿದೆ ಎಂದು ನಂಬುವುದಿಲ್ಲ. ವಿಸ್ಮಯಾಳ ಆತ್ಮಹತ್ಯೆಗೆ ಕಾರಣರಾದ ಇತರರ ವಿರುದ್ಧ ಕ್ರಮಕ್ಕಾಗಿ ಪ್ರಯತ್ನವನ್ನು ಮುಂದುವರಿಸಲಾಗುವುದು’ ಎಂದು ಸಂತ್ರಸ್ತೆಯ ತಾಯಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>