<p><strong>ಚೆನ್ನೈ: </strong>ಎಐಎಡಿಎಂಕೆ ನಾಯಕಿ ವಿ.ಕೆ. ಶಶಿಕಲಾ ಬೆಂಗಳೂರಿನಿಂದ ತಮಿಳುನಾಡಿಗೆ ತೆರಳುವುದು ಒಂದು ದಿನ ವಿಳಂಬವಾಗಲಿದೆ.</p>.<p>‘ಚಿನ್ನಮ್ಮ (ವಿ.ಕೆ. ಶಶಿಕಲಾ) ಫೆಬ್ರುವರಿ 7ರ ಬದಲು ಫೆಬ್ರುವರಿ 8ರಂದು ತಮಿಳುನಾಡಿಗೆ ಬರಲಿದ್ದಾರೆ’ ಎಂದು ಅಮ್ಮ ಮಕ್ಕಳ್ ಮುನ್ನೇತ್ರ ಕಳಗಂ (ಎಎಂಎಂಕೆ) ಪ್ರಧಾನ ಕಾರ್ಯದರ್ಶಿ ಮತ್ತು ಶಶಿಕಲಾ ಸಂಬಂಧಿ ಟಿ.ಟಿ.ವಿ ದಿನಕರನ್ ತಿಳಿಸಿದ್ದಾರೆ.</p>.<p>ಬೆಂಗಳೂರಿನಿಂದ ಚೆನ್ನೈಗೆ ಬರಲಿರುವ ಶಶಿಕಲಾ ಅವರಿಗೆ ಅದ್ದೂರಿ ಸ್ವಾಗತ ನೀಡಲು ಎಎಂಎಂಕೆ ಕಾರ್ಯಕರ್ತರು ಸಿದ್ಧತೆ ನಡೆಸಿದ್ದಾರೆ. ಶಶಿಕಲಾ ಅವರ ಪ್ರಯಾಣದ ಸಂದರ್ಭದಲ್ಲಿ ಹೆಲಿಕಾಪ್ಟರ್ಗಳ ಮೂಲಕ ಪುಷ್ಪಗಳನ್ನು ಸುರಿಯಲು ಅನುಮತಿ ನೀಡುವಂತೆ ಕೋರಿ ಮಾಜಿ ಶಾಸಕಿ ಜಯಂತಿ ಪದ್ಮನಾಭನ್ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.</p>.<p>ಬೆಂಗಳೂರಿನಿಂದ ಚೆನ್ನೈ ಮಾರ್ಗದಲ್ಲಿ 40ಕ್ಕೂ ಹೆಚ್ಚು ಸ್ಥಳಗಳಲ್ಲಿ ಬೆಂಬಲಿಗರು ಅದ್ದೂರಿಯಾಗಿ ಸ್ವಾಗತಿಸಲಿದ್ದಾರೆ.</p>.<p>ಶಶಿಕಲಾ ವಿರುದ್ಧ ದೂರು: ಶಶಿಕಲಾ ಅವರು ಪಕ್ಷದ ಧ್ವಜವನ್ನು ಕಾನೂನುಬಾಹಿರವಾಗಿ ತಮ್ಮ ಕಾರಿನ ಮೇಲೆ ಬಳಸಿದ್ದಾರೆ ಎಂದು ಆರೋಪಿಸಿ ಎಐಎಡಿಎಂಕೆ ಹಿರಿಯ ಮುಖಂಡರು ಪೊಲೀಸರಿಗೆ ದೂರು ನೀಡಿದ್ದಾರೆ.</p>.<p>ಪೊಲೀಸ್ ಮಹಾನಿರ್ದೇಶಕ ಜೆ.ಕೆ. ತ್ರಿಪಾಠಿ ಅವರನ್ನು ಭೇಟಿಯಾದ ನಾಲ್ವರು ಸಚಿವರು ಮತ್ತು ಪಕ್ಷದ ಹಿರಿಯ ಮುಖಂಡರು, ಎಐಎಡಿಎಂಕೆ ಧ್ವಜವನ್ನು ಹೊರಗಿನವರು ಬಳಸಲು ಅವಕಾಶ ಇಲ್ಲ ಎಂದು ತಿಳಿಸಿದರು.</p>.<p>‘ಪಕ್ಷದ ಧ್ವಜ ಬಳಸಲು ಶಶಿಕಲಾ ಅವರಿಗೆ ಯಾವುದೇ ರೀತಿಯ ಹಕ್ಕು ಇಲ್ಲ. ಎಐಎಡಿಎಂಕೆ ಪ್ರಾಥಮಿಕ ಸದಸ್ಯತ್ವವವನ್ನೂ ಅವರು ಹೊಂದಿಲ್ಲ. ಪಕ್ಷದ ಪದಾಧಿಕಾರಿಗಳು ಮಾತ್ರ ಧ್ವಜ ಬಳಸಬಹುದು’ ಎಂದು ಕಾನೂನು ಸಚಿವ ಷಣ್ಮುಗಂ ತಿಳಿಸಿದ್ದಾರೆ.</p>.<p>ಜನವರಿ 31ರಂದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಿಂದ ಬಿಡುಗಡೆಯಾದಾಗ ಶಶಿಕಲಾ ಬಳಸಿದ್ದ ಕಾರಿನ ಮೇಲೆ ಎಐಎಡಿಎಂಕೆ ಪಕ್ಷದ ಧ್ವಜ ಹಾಕಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ: </strong>ಎಐಎಡಿಎಂಕೆ ನಾಯಕಿ ವಿ.ಕೆ. ಶಶಿಕಲಾ ಬೆಂಗಳೂರಿನಿಂದ ತಮಿಳುನಾಡಿಗೆ ತೆರಳುವುದು ಒಂದು ದಿನ ವಿಳಂಬವಾಗಲಿದೆ.</p>.<p>‘ಚಿನ್ನಮ್ಮ (ವಿ.ಕೆ. ಶಶಿಕಲಾ) ಫೆಬ್ರುವರಿ 7ರ ಬದಲು ಫೆಬ್ರುವರಿ 8ರಂದು ತಮಿಳುನಾಡಿಗೆ ಬರಲಿದ್ದಾರೆ’ ಎಂದು ಅಮ್ಮ ಮಕ್ಕಳ್ ಮುನ್ನೇತ್ರ ಕಳಗಂ (ಎಎಂಎಂಕೆ) ಪ್ರಧಾನ ಕಾರ್ಯದರ್ಶಿ ಮತ್ತು ಶಶಿಕಲಾ ಸಂಬಂಧಿ ಟಿ.ಟಿ.ವಿ ದಿನಕರನ್ ತಿಳಿಸಿದ್ದಾರೆ.</p>.<p>ಬೆಂಗಳೂರಿನಿಂದ ಚೆನ್ನೈಗೆ ಬರಲಿರುವ ಶಶಿಕಲಾ ಅವರಿಗೆ ಅದ್ದೂರಿ ಸ್ವಾಗತ ನೀಡಲು ಎಎಂಎಂಕೆ ಕಾರ್ಯಕರ್ತರು ಸಿದ್ಧತೆ ನಡೆಸಿದ್ದಾರೆ. ಶಶಿಕಲಾ ಅವರ ಪ್ರಯಾಣದ ಸಂದರ್ಭದಲ್ಲಿ ಹೆಲಿಕಾಪ್ಟರ್ಗಳ ಮೂಲಕ ಪುಷ್ಪಗಳನ್ನು ಸುರಿಯಲು ಅನುಮತಿ ನೀಡುವಂತೆ ಕೋರಿ ಮಾಜಿ ಶಾಸಕಿ ಜಯಂತಿ ಪದ್ಮನಾಭನ್ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.</p>.<p>ಬೆಂಗಳೂರಿನಿಂದ ಚೆನ್ನೈ ಮಾರ್ಗದಲ್ಲಿ 40ಕ್ಕೂ ಹೆಚ್ಚು ಸ್ಥಳಗಳಲ್ಲಿ ಬೆಂಬಲಿಗರು ಅದ್ದೂರಿಯಾಗಿ ಸ್ವಾಗತಿಸಲಿದ್ದಾರೆ.</p>.<p>ಶಶಿಕಲಾ ವಿರುದ್ಧ ದೂರು: ಶಶಿಕಲಾ ಅವರು ಪಕ್ಷದ ಧ್ವಜವನ್ನು ಕಾನೂನುಬಾಹಿರವಾಗಿ ತಮ್ಮ ಕಾರಿನ ಮೇಲೆ ಬಳಸಿದ್ದಾರೆ ಎಂದು ಆರೋಪಿಸಿ ಎಐಎಡಿಎಂಕೆ ಹಿರಿಯ ಮುಖಂಡರು ಪೊಲೀಸರಿಗೆ ದೂರು ನೀಡಿದ್ದಾರೆ.</p>.<p>ಪೊಲೀಸ್ ಮಹಾನಿರ್ದೇಶಕ ಜೆ.ಕೆ. ತ್ರಿಪಾಠಿ ಅವರನ್ನು ಭೇಟಿಯಾದ ನಾಲ್ವರು ಸಚಿವರು ಮತ್ತು ಪಕ್ಷದ ಹಿರಿಯ ಮುಖಂಡರು, ಎಐಎಡಿಎಂಕೆ ಧ್ವಜವನ್ನು ಹೊರಗಿನವರು ಬಳಸಲು ಅವಕಾಶ ಇಲ್ಲ ಎಂದು ತಿಳಿಸಿದರು.</p>.<p>‘ಪಕ್ಷದ ಧ್ವಜ ಬಳಸಲು ಶಶಿಕಲಾ ಅವರಿಗೆ ಯಾವುದೇ ರೀತಿಯ ಹಕ್ಕು ಇಲ್ಲ. ಎಐಎಡಿಎಂಕೆ ಪ್ರಾಥಮಿಕ ಸದಸ್ಯತ್ವವವನ್ನೂ ಅವರು ಹೊಂದಿಲ್ಲ. ಪಕ್ಷದ ಪದಾಧಿಕಾರಿಗಳು ಮಾತ್ರ ಧ್ವಜ ಬಳಸಬಹುದು’ ಎಂದು ಕಾನೂನು ಸಚಿವ ಷಣ್ಮುಗಂ ತಿಳಿಸಿದ್ದಾರೆ.</p>.<p>ಜನವರಿ 31ರಂದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಿಂದ ಬಿಡುಗಡೆಯಾದಾಗ ಶಶಿಕಲಾ ಬಳಸಿದ್ದ ಕಾರಿನ ಮೇಲೆ ಎಐಎಡಿಎಂಕೆ ಪಕ್ಷದ ಧ್ವಜ ಹಾಕಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>