2018ರಲ್ಲಿ ನಡೆದಿದ್ದ ರಾಜ್ಯಸಭೆ ಚುನಾವಣೆಯಲ್ಲಿ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಶಾಸಕ ಅಮಿತ್ ಕುಮಾರ್ ಮಹತೊ ಅವರು ಮತ ಚಲಾಯಿಸಿದ ಬಳಿಕ ಅವರ ಮೇಲಿನ ಆರೋಪ ಸಾಬೀತಾಗಿತ್ತು. ಅವರು ಕಾಂಗ್ರೆಸ್ ಅಭ್ಯರ್ಥಿ ಧೀರಜ್ ಪ್ರಸಾದ್ ಸಾಹು ಪರ ಮತ ಚಲಾಯಿಸಿದ್ದರು. ಚುನಾವಣೆಯಲ್ಲಿ ಸಾಹು ಗೆಲುವು ದಾಖಲಿಸಿದ್ದರು. ಇದನ್ನು ಪ್ರಶ್ನಿಸಿ ಪರಾಜಿತಗೊಂಡಿದ್ದ ಬಿಜೆಪಿ ಅಭ್ಯರ್ಥಿ ಪ್ರದೀಪ್ಕುಮಾರ್ ಸೊಂಥಾಲಿಯಾ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಅವರ ಅರ್ಜಿಯನ್ನು ಜಾರ್ಖಂಡ್ ಹೈಕೋರ್ಟ್ ತಿರಸ್ಕರಿಸಿತ್ತು. ಇದರ ವಿರುದ್ಧ ಸೊಂಥಾಲಿಯಾ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬಡೆ ನೇತೃತ್ವದ ತ್ರಿ ಸದಸ್ಯ ಪೀಠವು ಇದರ ವಿಚಾರಣೆ ನಡೆಸಿತು.