‘ಬಾಟಲಿಯನ್ನು ದೂರದಿಂದ ಎಸೆಯಲಾಗಿದೆ. ಅದು ಕೇಜ್ರಿವಾಲ್ ಅವರ ತಲೆ ಮೇಲಿಂದ ಹಾರಿ ಬಿದ್ದಿತು. ಕೇಜ್ರಿವಾಲ್ ಅವರ ಮೇಲೆಯೇ ಬಾಟಲಿಯನ್ನು ಎಸೆಯಲಾಗಿದೆ ಎಂದು ಮೇಲ್ನೋಟಕ್ಕೆ ಅನ್ನಿಸುತ್ತದೆ. ಆದರೆ, ಇದನ್ನು ಪುಷ್ಟೀಕರಿಸಲು ನಮ್ಮ ಬಳಿ ಯಾವುದೇ ಸಾಕ್ಷ್ಯ ಇಲ್ಲ. ಆದ್ದರಿಂದ ಪೊಲೀಸರಿಗೆ ದೂರು ನೀಡಲಿಲ್ಲ’ ಎಂದು ಎಎಪಿಯ ಮಾಧ್ಯಮ ಸಂಯೋಜಕ ಸುಖನ್ರಾಜ್ ಅವರು ತಿಳಿಸಿದರು.