<p class="title"><strong>ಚೆನ್ನೈ:</strong>ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ 5 ಲಕ್ಷಕ್ಕೂ ಹೆಚ್ಚು ಎಕರೆಯಲ್ಲಿ ಕುರುವೈ (ಅಲ್ಪಾವಧಿ ಬೆಳೆ) ಬೆಳೆ ಬೆಳೆಯಲು ಮೆಟ್ಟೂರಿನ ಸ್ಟ್ಯಾನ್ಲಿ ಜಲಾಶಯದಿಂದ ಮಂಗಳವಾರ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ನೀರು ಬಿಡುಗಡೆ ಮಾಡಿದರು.</p>.<p class="title">ಮೆಟ್ಟೂರು ಜಲಾಶಯದಲ್ಲಿ ಗುಂಡಿ ಒತ್ತುವ ಮೂಲಕ ಮುಖ್ಯಮಂತ್ರಿ ಸ್ಟಾಲಿನ್ ಅವರು ನೀರು ಬಿಡುಗಡೆಗೆ ಚಾಲನೆ ನೀಡಿದರು. ಬಳಿಕ ಜಲಾಶಯಕ್ಕೆ ಪುಷ್ಪವೃಷ್ಟಿ ಮಾಡಿದರು. ಈ ಸಂದರ್ಭದಲ್ಲಿ ಸಚಿವರಾದ ದೊರೈ ಮುರುಗನ್, ಕೆ.ಎನ್. ನೆಹರು ಮತ್ತು ಇತರ ಅಧಿಕಾರಿಗಳು ಹಾಜರಿದ್ದರು.</p>.<p class="title">ಕರ್ನಾಟಕದ ಕಾವೇರಿ ನದಿಯ ಜಲಾನಯನ ಪ್ರದೇಶಗಳಲ್ಲಿ ಅಕಾಲಿಕ ಮಳೆಯಿಂದಾಗಿ ಜಲಾಶಯಕ್ಕೆ ನಿರಂತರವಾಗಿ ನೀರಿನ ಒಳಹರಿವು ಹೆಚ್ಚಾಗಿದ್ದು, ಜಲಾಶಯದ ಪೂರ್ಣ ಮಟ್ಟ 120 ಅಡಿ ತಲುಪುವ ಸಾಧ್ಯತೆ ಇದೆ.ಹಾಗಾಗಿ, ಈ ಹಿಂದೆ ನಿಗದಿಪಡಿಸಿದಂತೆ ಜೂನ್ 12ಕ್ಕೂ ಮುನ್ನವೇ ತಮಿಳುನಾಡು ಸರ್ಕಾರ ನೀರು ಬಿಡುಗಡೆ ಮಾಡಿದೆ.</p>.<p class="title">ಬ್ರಿಟಿಷರು ನಿರ್ಮಿಸಿರುವ ಈ ಜಲಾಶಯದಿಂದಸ್ವಾತಂತ್ರ್ಯಾನಂತರ ನಿಗದಿತ ದಿನಾಂಕಕ್ಕೂ ಮುನ್ನವೇ ಮೇ ತಿಂಗಳಲ್ಲಿ ಇದೇ ಮೊದಲ ಬಾರಿಗೆ ಅಣೆಕಟ್ಟಿನಿಂದ ನೀರನ್ನು ಹರಿಸಲಾಗುತ್ತಿದೆ.ಮೆಟ್ಟೂರು ಅಣೆಕಟ್ಟಿನಿಂದ ಹರಿಸಲಾಗುವ ನೀರು ತಂಜಾವೂರು, ತಿರುವರೂರು, ನಾಗಪಟ್ಟಣಂ, ಮೈಲಾಡುತುರೈ ಮತ್ತು ಪುದುಕೊಟ್ಟೈ, ತಿರುಚಿರಾಪಳ್ಳಿ ಮತ್ತು ಕಡಲೂರು ಭಾಗಗಳ ರೈತರ ಜೀವನಾಡಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಚೆನ್ನೈ:</strong>ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ 5 ಲಕ್ಷಕ್ಕೂ ಹೆಚ್ಚು ಎಕರೆಯಲ್ಲಿ ಕುರುವೈ (ಅಲ್ಪಾವಧಿ ಬೆಳೆ) ಬೆಳೆ ಬೆಳೆಯಲು ಮೆಟ್ಟೂರಿನ ಸ್ಟ್ಯಾನ್ಲಿ ಜಲಾಶಯದಿಂದ ಮಂಗಳವಾರ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ನೀರು ಬಿಡುಗಡೆ ಮಾಡಿದರು.</p>.<p class="title">ಮೆಟ್ಟೂರು ಜಲಾಶಯದಲ್ಲಿ ಗುಂಡಿ ಒತ್ತುವ ಮೂಲಕ ಮುಖ್ಯಮಂತ್ರಿ ಸ್ಟಾಲಿನ್ ಅವರು ನೀರು ಬಿಡುಗಡೆಗೆ ಚಾಲನೆ ನೀಡಿದರು. ಬಳಿಕ ಜಲಾಶಯಕ್ಕೆ ಪುಷ್ಪವೃಷ್ಟಿ ಮಾಡಿದರು. ಈ ಸಂದರ್ಭದಲ್ಲಿ ಸಚಿವರಾದ ದೊರೈ ಮುರುಗನ್, ಕೆ.ಎನ್. ನೆಹರು ಮತ್ತು ಇತರ ಅಧಿಕಾರಿಗಳು ಹಾಜರಿದ್ದರು.</p>.<p class="title">ಕರ್ನಾಟಕದ ಕಾವೇರಿ ನದಿಯ ಜಲಾನಯನ ಪ್ರದೇಶಗಳಲ್ಲಿ ಅಕಾಲಿಕ ಮಳೆಯಿಂದಾಗಿ ಜಲಾಶಯಕ್ಕೆ ನಿರಂತರವಾಗಿ ನೀರಿನ ಒಳಹರಿವು ಹೆಚ್ಚಾಗಿದ್ದು, ಜಲಾಶಯದ ಪೂರ್ಣ ಮಟ್ಟ 120 ಅಡಿ ತಲುಪುವ ಸಾಧ್ಯತೆ ಇದೆ.ಹಾಗಾಗಿ, ಈ ಹಿಂದೆ ನಿಗದಿಪಡಿಸಿದಂತೆ ಜೂನ್ 12ಕ್ಕೂ ಮುನ್ನವೇ ತಮಿಳುನಾಡು ಸರ್ಕಾರ ನೀರು ಬಿಡುಗಡೆ ಮಾಡಿದೆ.</p>.<p class="title">ಬ್ರಿಟಿಷರು ನಿರ್ಮಿಸಿರುವ ಈ ಜಲಾಶಯದಿಂದಸ್ವಾತಂತ್ರ್ಯಾನಂತರ ನಿಗದಿತ ದಿನಾಂಕಕ್ಕೂ ಮುನ್ನವೇ ಮೇ ತಿಂಗಳಲ್ಲಿ ಇದೇ ಮೊದಲ ಬಾರಿಗೆ ಅಣೆಕಟ್ಟಿನಿಂದ ನೀರನ್ನು ಹರಿಸಲಾಗುತ್ತಿದೆ.ಮೆಟ್ಟೂರು ಅಣೆಕಟ್ಟಿನಿಂದ ಹರಿಸಲಾಗುವ ನೀರು ತಂಜಾವೂರು, ತಿರುವರೂರು, ನಾಗಪಟ್ಟಣಂ, ಮೈಲಾಡುತುರೈ ಮತ್ತು ಪುದುಕೊಟ್ಟೈ, ತಿರುಚಿರಾಪಳ್ಳಿ ಮತ್ತು ಕಡಲೂರು ಭಾಗಗಳ ರೈತರ ಜೀವನಾಡಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>