ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೆಟ್ಟೂರು ಜಲಾಶಯದಿಂದ ನೀರು ಬಿಡುಗಡೆ

Last Updated 24 ಮೇ 2022, 13:36 IST
ಅಕ್ಷರ ಗಾತ್ರ

ಚೆನ್ನೈ:ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ 5 ಲಕ್ಷಕ್ಕೂ ಹೆಚ್ಚು ಎಕರೆಯಲ್ಲಿ ಕುರುವೈ (ಅಲ್ಪಾವಧಿ ಬೆಳೆ) ಬೆಳೆ ಬೆಳೆಯಲು ಮೆಟ್ಟೂರಿನ ಸ್ಟ್ಯಾನ್ಲಿ ಜಲಾಶಯದಿಂದ ಮಂಗಳವಾರ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ನೀರು ಬಿಡುಗಡೆ ಮಾಡಿದರು.

ಮೆಟ್ಟೂರು ಜಲಾಶಯದಲ್ಲಿ ಗುಂಡಿ ಒತ್ತುವ ಮೂಲಕ ಮುಖ್ಯಮಂತ್ರಿ ಸ್ಟಾಲಿನ್ ಅವರು ನೀರು ಬಿಡುಗಡೆಗೆ ಚಾಲನೆ ನೀಡಿದರು. ಬಳಿಕ ಜಲಾಶಯಕ್ಕೆ ಪುಷ್ಪವೃಷ್ಟಿ ಮಾಡಿದರು. ಈ ಸಂದರ್ಭದಲ್ಲಿ ಸಚಿವರಾದ ದೊರೈ ಮುರುಗನ್, ಕೆ.ಎನ್. ನೆಹರು ಮತ್ತು ಇತರ ಅಧಿಕಾರಿಗಳು ಹಾಜರಿದ್ದರು.

ಕರ್ನಾಟಕದ ಕಾವೇರಿ ನದಿಯ ಜಲಾನಯನ ಪ್ರದೇಶಗಳಲ್ಲಿ ಅಕಾಲಿಕ ಮಳೆಯಿಂದಾಗಿ ಜಲಾಶಯಕ್ಕೆ ನಿರಂತರವಾಗಿ ನೀರಿನ ಒಳಹರಿವು ಹೆಚ್ಚಾಗಿದ್ದು, ಜಲಾಶಯದ ಪೂರ್ಣ ಮಟ್ಟ 120 ಅಡಿ ತಲುಪುವ ಸಾಧ್ಯತೆ ಇದೆ.ಹಾಗಾಗಿ, ಈ ಹಿಂದೆ ನಿಗದಿಪಡಿಸಿದಂತೆ ಜೂನ್‌ 12ಕ್ಕೂ ಮುನ್ನವೇ ತಮಿಳುನಾಡು ಸರ್ಕಾರ ನೀರು ಬಿಡುಗಡೆ ಮಾಡಿದೆ.

ಬ್ರಿಟಿಷರು ನಿರ್ಮಿಸಿರುವ ಈ ಜಲಾಶಯದಿಂದಸ್ವಾತಂತ್ರ್ಯಾನಂತರ ನಿಗದಿತ ದಿನಾಂಕಕ್ಕೂ ಮುನ್ನವೇ ಮೇ ತಿಂಗಳಲ್ಲಿ ಇದೇ ಮೊದಲ ಬಾರಿಗೆ ಅಣೆಕಟ್ಟಿನಿಂದ ನೀರನ್ನು ಹರಿಸಲಾಗುತ್ತಿದೆ.ಮೆಟ್ಟೂರು ಅಣೆಕಟ್ಟಿನಿಂದ ಹರಿಸಲಾಗುವ ನೀರು ತಂಜಾವೂರು, ತಿರುವರೂರು, ನಾಗಪಟ್ಟಣಂ, ಮೈಲಾಡುತುರೈ ಮತ್ತು ಪುದುಕೊಟ್ಟೈ, ತಿರುಚಿರಾಪಳ್ಳಿ ಮತ್ತು ಕಡಲೂರು ಭಾಗಗಳ ರೈತರ ಜೀವನಾಡಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT