<p><strong>ಕೋಲ್ಕತ್ತ:</strong> ‘ಕೋವಿಡ್–19 ಪಿಡುಗು ಇಲ್ಲವಾಗಿದೆ. ಆದರೆ, ಚುನಾವಣೆ ಕಾರಣದಿಂದಾಗಿ ಬಿಜೆಪಿಯ ಸಾರ್ವಜನಿಕ ಸಭೆಗಳನ್ನು ತಡೆಯುವ ಉದ್ದೇಶದಿಂದ ರಾಜ್ಯದಲ್ಲಿ ಲಾಕ್ಡೌನ್ ಹಾಗೂ ಇತರೆ ನಿರ್ಬಂಧಗಳನ್ನುಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿಧಿಸುತ್ತಿದ್ದಾರೆ’ ಎಂದು ಪಶ್ಚಿಮ ಬಂಗಾಳ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ದಿಲೀಪ್ ಘೋಷ್ ಪ್ರತಿಪಾದಿಸಿದ್ದಾರೆ.</p>.<p>ದೇಶದಲ್ಲಿ ಕೋವಿಡ್–19 ಪ್ರತಿನಿತ್ಯದ ಪ್ರಕರಣಗಳ ಸಂಖ್ಯೆ 95 ಸಾವಿರ ಹಾಗೂ ಪಶ್ಚಿಮ ಬಂಗಾಳದಲ್ಲಿ 3 ಸಾವಿರ ದಾಖಲಾಗಿರುವ ಸಂದರ್ಭದಲ್ಲೇ ಘೋಷ್ ಅವರು ಈ ಹೇಳಿಕೆ ನೀಡಿದ್ದಾರೆ. ಬುಧವಾರ ಹೂಗ್ಲಿ ಜಿಲ್ಲೆಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಪರಸ್ಪರ ಅಂತರವನ್ನು ಕಾಯ್ದುಕೊಳ್ಳದೇಸಾವಿರಾರು ಜನರು ಭಾಗವಹಿಸಿದ್ದು, ಈ ವೇಳೆ ಘೋಷ್ ಅವರು ಮಾತನಾಡಿರುವ ವಿಡಿಯೊ ಇದೀಗ ವೈರಲ್ ಆಗಿದೆ.</p>.<p>‘ದೀದಿಯ ಬೆಂಬಲಿಗರು, ಈ ಸಭೆಯಲ್ಲಿ ಸೇರಿರುವ ಜನರನ್ನು ನೋಡಿ ದಂಗಾಗಿದೆ. ಕೊರೊನಾ ಮುಗಿದ ಅಧ್ಯಾಯ. ಕೊರೊನಾ ವೈರಸ್ ಭಯದಿಂದ ಅಲ್ಲ, ಬಿಜೆಪಿಯ ಭಯದಿಂದಾಗಿ ದೀದಿ ಅನಗತ್ಯವಾಗಿ ಲಾಕ್ಡೌನ್ ಹೇರುತ್ತಿದ್ದಾರೆ’ ಎಂದು ಘೋಷ್ ಸಭೆಯಲ್ಲಿ ಉಲ್ಲೇಖಿಸಿದ್ದರು. </p>.<p>ಘೋಷ್ ಅವರ ಹೇಳಿಕೆಯನ್ನು ತೃಣಮೂಲ ಕಾಂಗ್ರೆಸ್(ಟಿಎಂಸಿ) ಟೀಕಿಸಿದ್ದು, ‘ಪ್ರತಿನಿತ್ಯ ರಾಜ್ಯದಲ್ಲಿ ಮೂರು ಸಾವಿರಕ್ಕೂ ಅಧಿಕ ಕೋವಿಡ್–19 ಪ್ರಕರಣಗಳು ದಾಖಲಾಗುತ್ತಿದ್ದು, ಇಂಥ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ದಿಲೀಪ್ ಘೋಷ್ ಅವರು ಈ ರೀತಿಯ ಹಾಸ್ಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅವರು ಚಿಕಿತ್ಸೆಗಾಗಿ ಯಾವುದಾದರೂ ವೈದ್ಯರ ಬಳಿ ಹೋಗಲಿ’ ಎಂದು ಟಿಎಂಸಿ ಸಂಸದ ಕಲ್ಯಾಣ್ ಬಂಡೋಪಾಧ್ಯಾಯ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ‘ಕೋವಿಡ್–19 ಪಿಡುಗು ಇಲ್ಲವಾಗಿದೆ. ಆದರೆ, ಚುನಾವಣೆ ಕಾರಣದಿಂದಾಗಿ ಬಿಜೆಪಿಯ ಸಾರ್ವಜನಿಕ ಸಭೆಗಳನ್ನು ತಡೆಯುವ ಉದ್ದೇಶದಿಂದ ರಾಜ್ಯದಲ್ಲಿ ಲಾಕ್ಡೌನ್ ಹಾಗೂ ಇತರೆ ನಿರ್ಬಂಧಗಳನ್ನುಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿಧಿಸುತ್ತಿದ್ದಾರೆ’ ಎಂದು ಪಶ್ಚಿಮ ಬಂಗಾಳ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ದಿಲೀಪ್ ಘೋಷ್ ಪ್ರತಿಪಾದಿಸಿದ್ದಾರೆ.</p>.<p>ದೇಶದಲ್ಲಿ ಕೋವಿಡ್–19 ಪ್ರತಿನಿತ್ಯದ ಪ್ರಕರಣಗಳ ಸಂಖ್ಯೆ 95 ಸಾವಿರ ಹಾಗೂ ಪಶ್ಚಿಮ ಬಂಗಾಳದಲ್ಲಿ 3 ಸಾವಿರ ದಾಖಲಾಗಿರುವ ಸಂದರ್ಭದಲ್ಲೇ ಘೋಷ್ ಅವರು ಈ ಹೇಳಿಕೆ ನೀಡಿದ್ದಾರೆ. ಬುಧವಾರ ಹೂಗ್ಲಿ ಜಿಲ್ಲೆಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಪರಸ್ಪರ ಅಂತರವನ್ನು ಕಾಯ್ದುಕೊಳ್ಳದೇಸಾವಿರಾರು ಜನರು ಭಾಗವಹಿಸಿದ್ದು, ಈ ವೇಳೆ ಘೋಷ್ ಅವರು ಮಾತನಾಡಿರುವ ವಿಡಿಯೊ ಇದೀಗ ವೈರಲ್ ಆಗಿದೆ.</p>.<p>‘ದೀದಿಯ ಬೆಂಬಲಿಗರು, ಈ ಸಭೆಯಲ್ಲಿ ಸೇರಿರುವ ಜನರನ್ನು ನೋಡಿ ದಂಗಾಗಿದೆ. ಕೊರೊನಾ ಮುಗಿದ ಅಧ್ಯಾಯ. ಕೊರೊನಾ ವೈರಸ್ ಭಯದಿಂದ ಅಲ್ಲ, ಬಿಜೆಪಿಯ ಭಯದಿಂದಾಗಿ ದೀದಿ ಅನಗತ್ಯವಾಗಿ ಲಾಕ್ಡೌನ್ ಹೇರುತ್ತಿದ್ದಾರೆ’ ಎಂದು ಘೋಷ್ ಸಭೆಯಲ್ಲಿ ಉಲ್ಲೇಖಿಸಿದ್ದರು. </p>.<p>ಘೋಷ್ ಅವರ ಹೇಳಿಕೆಯನ್ನು ತೃಣಮೂಲ ಕಾಂಗ್ರೆಸ್(ಟಿಎಂಸಿ) ಟೀಕಿಸಿದ್ದು, ‘ಪ್ರತಿನಿತ್ಯ ರಾಜ್ಯದಲ್ಲಿ ಮೂರು ಸಾವಿರಕ್ಕೂ ಅಧಿಕ ಕೋವಿಡ್–19 ಪ್ರಕರಣಗಳು ದಾಖಲಾಗುತ್ತಿದ್ದು, ಇಂಥ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ದಿಲೀಪ್ ಘೋಷ್ ಅವರು ಈ ರೀತಿಯ ಹಾಸ್ಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅವರು ಚಿಕಿತ್ಸೆಗಾಗಿ ಯಾವುದಾದರೂ ವೈದ್ಯರ ಬಳಿ ಹೋಗಲಿ’ ಎಂದು ಟಿಎಂಸಿ ಸಂಸದ ಕಲ್ಯಾಣ್ ಬಂಡೋಪಾಧ್ಯಾಯ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>