ಘೋಷ್ ಅವರ ಹೇಳಿಕೆಯನ್ನು ತೃಣಮೂಲ ಕಾಂಗ್ರೆಸ್(ಟಿಎಂಸಿ) ಟೀಕಿಸಿದ್ದು, ‘ಪ್ರತಿನಿತ್ಯ ರಾಜ್ಯದಲ್ಲಿ ಮೂರು ಸಾವಿರಕ್ಕೂ ಅಧಿಕ ಕೋವಿಡ್–19 ಪ್ರಕರಣಗಳು ದಾಖಲಾಗುತ್ತಿದ್ದು, ಇಂಥ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ದಿಲೀಪ್ ಘೋಷ್ ಅವರು ಈ ರೀತಿಯ ಹಾಸ್ಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅವರು ಚಿಕಿತ್ಸೆಗಾಗಿ ಯಾವುದಾದರೂ ವೈದ್ಯರ ಬಳಿ ಹೋಗಲಿ’ ಎಂದು ಟಿಎಂಸಿ ಸಂಸದ ಕಲ್ಯಾಣ್ ಬಂಡೋಪಾಧ್ಯಾಯ ಹೇಳಿದರು.