<p><strong>ಕೋಲ್ಕತ್ತ</strong>: ‘ಪೆಗಾಸಸ್ ಕುತಂತ್ರಾಂಶವನ್ನು ಬಳಸಿ ಪತ್ರಕರ್ತರು, ರಾಜಕೀಯ ನಾಯಕರ ಮೇಲೆ ಗೂಢಚರ್ಯೆ ನಡೆಸಿದ ಆರೋಪದ ಬಗ್ಗೆ ತನಿಖೆ ನಡೆಸಲು ಇಬ್ಬರು ಸದಸ್ಯರನ್ನು ಒಳಗೊಂಡ ತನಿಖಾ ಆಯೋಗವನ್ನು ರಚಿಸಲಾಗಿದೆ’ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದರು.</p>.<p>ಸೋಮವಾರ ನಡೆದ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕೇಂದ್ರ ಸರ್ಕಾರವು ಈ ಸಂಬಂಧ ತನಿಖಾ ಆಯೋಗ ರಚಿಸಬಹುದು ಅಥವಾ ಕೋರ್ಟ್ ಮೇಲುಸ್ತುವಾರಿಯಲ್ಲಿ ತನಿಖೆ ನಡೆಸಬಹುದು ಎಂದು ಭಾವಿಸಿದ್ದೆವು. ಆದರೆ, ಕೇಂದ್ರವು ಸುಮ್ಮನೆ ಕುಳಿತಿದೆ. ಹಾಗಾಗಿ ಈ ಆರೋಪದ ಬಗ್ಗೆ ತನಿಖೆ ನಡೆಸಲು ಆಯೋಗ ರಚಿಸಲಾಗಿದೆ’ ಎಂದು ಅವರು ತಿಳಿಸಿದರು.</p>.<p>ಕಲ್ಕತ್ತ ಹೈಕೋರ್ಟ್ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಜ್ಯೋತಿರ್ಮೇ ಭಟ್ಟಾಚಾರ್ಯ ಮತ್ತು ಸುಪ್ರೀಂಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಮದನ್ ಭೀಮರಾವ್ ಲೊಕೂರ್ ಅವರನ್ನೊಳಗೊಂಡ ಆಯೋಗ ಈ ಕುರಿತು ತನಿಖೆ ನಡೆಸಲಿದೆ ಎಂದರು.</p>.<p>‘ಪಶ್ಚಿಮ ಬಂಗಾಳದ ಜನರ ಹೆಸರು ಕೂಡ ಪೆಗಾಸಸ್ ಪಟ್ಟಿಯಲ್ಲಿ ಇದೆ ಎಂಬುದು ತಿಳಿದುಬಂದಿದೆ. ಕೇಂದ್ರ ಸರ್ಕಾರವು ಎಲ್ಲರ ಮೇಲೆ ನಿಗಾಯಿಡಲು ಪ್ರಯತ್ನಿಸುತ್ತಿದೆ. ಈ ಬಗ್ಗೆ ಆಯೋಗವು ತನಿಖೆ ನಡೆಸಲಿದೆ’ ಎಂದು ಅವರು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ‘ಪೆಗಾಸಸ್ ಕುತಂತ್ರಾಂಶವನ್ನು ಬಳಸಿ ಪತ್ರಕರ್ತರು, ರಾಜಕೀಯ ನಾಯಕರ ಮೇಲೆ ಗೂಢಚರ್ಯೆ ನಡೆಸಿದ ಆರೋಪದ ಬಗ್ಗೆ ತನಿಖೆ ನಡೆಸಲು ಇಬ್ಬರು ಸದಸ್ಯರನ್ನು ಒಳಗೊಂಡ ತನಿಖಾ ಆಯೋಗವನ್ನು ರಚಿಸಲಾಗಿದೆ’ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದರು.</p>.<p>ಸೋಮವಾರ ನಡೆದ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕೇಂದ್ರ ಸರ್ಕಾರವು ಈ ಸಂಬಂಧ ತನಿಖಾ ಆಯೋಗ ರಚಿಸಬಹುದು ಅಥವಾ ಕೋರ್ಟ್ ಮೇಲುಸ್ತುವಾರಿಯಲ್ಲಿ ತನಿಖೆ ನಡೆಸಬಹುದು ಎಂದು ಭಾವಿಸಿದ್ದೆವು. ಆದರೆ, ಕೇಂದ್ರವು ಸುಮ್ಮನೆ ಕುಳಿತಿದೆ. ಹಾಗಾಗಿ ಈ ಆರೋಪದ ಬಗ್ಗೆ ತನಿಖೆ ನಡೆಸಲು ಆಯೋಗ ರಚಿಸಲಾಗಿದೆ’ ಎಂದು ಅವರು ತಿಳಿಸಿದರು.</p>.<p>ಕಲ್ಕತ್ತ ಹೈಕೋರ್ಟ್ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಜ್ಯೋತಿರ್ಮೇ ಭಟ್ಟಾಚಾರ್ಯ ಮತ್ತು ಸುಪ್ರೀಂಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಮದನ್ ಭೀಮರಾವ್ ಲೊಕೂರ್ ಅವರನ್ನೊಳಗೊಂಡ ಆಯೋಗ ಈ ಕುರಿತು ತನಿಖೆ ನಡೆಸಲಿದೆ ಎಂದರು.</p>.<p>‘ಪಶ್ಚಿಮ ಬಂಗಾಳದ ಜನರ ಹೆಸರು ಕೂಡ ಪೆಗಾಸಸ್ ಪಟ್ಟಿಯಲ್ಲಿ ಇದೆ ಎಂಬುದು ತಿಳಿದುಬಂದಿದೆ. ಕೇಂದ್ರ ಸರ್ಕಾರವು ಎಲ್ಲರ ಮೇಲೆ ನಿಗಾಯಿಡಲು ಪ್ರಯತ್ನಿಸುತ್ತಿದೆ. ಈ ಬಗ್ಗೆ ಆಯೋಗವು ತನಿಖೆ ನಡೆಸಲಿದೆ’ ಎಂದು ಅವರು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>