ಕೋಲ್ಕತ್ತ: ಚುನಾವಣೋತ್ತರ ಹಿಂಸಾಚಾರದ ವೇಳೆ ಮನೆ ಬಿಟ್ಟು ಹೋದವರನ್ನು ಅವರವರ ಮನೆಗಳಿಗೆ ವಾಪಸಾಗುವಂತೆ ಮಾಡಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಲ್ಕತ್ತ ಹೈಕೋರ್ಟ್ ಸೂಚಿಸಿದೆ.
ಹಿಂಸಾಚಾರದಿಂದ ಅನೇಕರು ಬಲವಂತವಾಗಿ ಮನೆ ಬಿಟ್ಟು ತೆರಳಬೇಕಾದ ಸಂದರ್ಭ ಬಂದಿತ್ತು ಎಂಬ ದೂರುಗಳ ಬಗ್ಗೆ ಐವರು ನ್ಯಾಯಾಧೀಶರ ಪೀಠ ವಿಚಾರಣೆ ನಡೆಸಿದೆ. ರಾಜ್ಯದ ಹಲವು ಜಿಲ್ಲೆಗಳಿಂದ ದೂರುಗಳು ಬಂದಿವೆ ಎಂದು ಪೀಠ ಹೇಳಿದೆ.
ಹಿಂಸಾಚಾರದಿಂದ ತೊಂದರೆಗೀಡಾದವರು ರಾಜ್ಯ ಗೃಹ ಕಾರ್ಯದರ್ಶಿ ನೀಡಿರುವ ಅಧಿಕೃತ ಇ–ಮೇಲ್ ಐಡಿಗೆ ದೂರು ಸಲ್ಲಿಸಬಹುದು ಎಂದು ನ್ಯಾಯಪೀಠ ಹೇಳಿದೆ.
ಮೇ 2ರಂದು ರಾಜ್ಯ ವಿಧಾನಸಭೆ ಚುನಾವಣಾ ಫಲಿತಾಂಶ ಪ್ರಕಟಗೊಂಡಿತ್ತು. ಆ ಬಳಿಕ ರಾಜ್ಯದ ಹಲವೆಡೆ ಹಿಂಸಾಚಾರ ನಡೆದಿತ್ತು. ಹಿಂಸಾಚಾರದಿಂದಾಗಿ ಅನೇಕರು ಮನೆ ಬಿಟ್ಟು ಓಡಿಹೋಗಬೇಕಾದ ಸನ್ನಿವೇಶ ಸೃಷ್ಟಿಯಾಗಿತ್ತು ಎಂದೂ ವರದಿಯಾಗಿತ್ತು.