ಪಾರ್ಥ ಚಟರ್ಜಿ ಹಾಗೂ ಅರ್ಪಿತಾ ಮುಖರ್ಜಿ ಆಗಸ್ಟ್ 3ರವರೆಗೆ ನಮ್ಮ ವಶದಲ್ಲಿರಲಿದ್ದು, ಅದಕ್ಕೂ ಮುನ್ನವೇ ರಹಸ್ಯ ಸಂಕೇತಗಳು ಏನೆಂಬುದನ್ನು ತಿಳಿಯುವುದು ನಮ್ಮ ಉದ್ದೇಶವಾಗಿದೆ. ಇದರಿಂದ ಅವರನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸುವುದು ಸಾಧ್ಯವಾಗಲಿದೆ ಎಂದು ಜಾರಿ ನಿರ್ದೇಶನಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.