ಕೋಲ್ಕತ್ತ: ಪಶ್ಚಿಮ ಬಂಗಾಳದ ಶಿಕ್ಷಕರ ನೇಮಕಾತಿ ಹಗರಣಕ್ಕೆಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ (ಇ.ಡಿ) ಬಂಧನಕ್ಕೊಳಗಾಗಿರುವ ರಾಜ್ಯ ಕೈಗಾರಿಕೆ ಹಾಗೂ ವಾಣಿಜ್ಯ ಸಚಿವ ಪಾರ್ಥ ಚಟರ್ಜಿ ಅವರನ್ನು ಸೋಮವಾರ ಬೆಳಿಗ್ಗೆ ವೈದ್ಯಕೀಯ ಪರೀಕ್ಷೆಗಾಗಿ ಭುವನೇಶ್ವರದ ಏಮ್ಸ್ಗೆ ಕರೆದೊಯ್ಯಲಾಗಿದೆ.
ಬೆಳಿಗ್ಗೆ 9ರ ಸುಮಾರಿಗೆ ಕೋಲ್ಕತ ವಿಮಾನ ನಿಲ್ದಾಣದಿಂದ ಭುವನೇಶ್ವರಕ್ಕೆ ಏರ್ ಆಂಬುಲೆನ್ಸ್ ಮೂಲಕ ಇ.ಡಿ ಅಧಿಕಾರಿಗಳು ಚಟರ್ಜಿ ಅವರನ್ನು ಕರೆದೊಯ್ದಿದ್ದಾರೆ.
ಕಲ್ಕತ್ತ ಹೈಕೋರ್ಟ್ನ ನ್ಯಾಯಮೂರ್ತಿ ಬಿಬೇಕ್ ಚೌಧುರಿ ಅವರ ಏಕಸದಸ್ಯ ಪೀಠದ ಆದೇಶದ ಅನ್ವಯ ಚಟರ್ಜಿ ಅವರನ್ನು ಭುವನೇಶ್ವರ ಏಮ್ಸ್ಗೆ ಕರೆದೊಯ್ಯಲಾಗಿದೆ.
ಏಮ್ಸ್ನಲ್ಲಿ ವೈದ್ಯಕೀಯ ಪರೀಕ್ಷೆಯ ಬಳಿಕ ಮಧ್ಯಾಹ್ನ 3ರ ವೇಳೆಗೆ ವರದಿಯನ್ನು ಸಲ್ಲಿಸುವಂತೆ ಕೋರ್ಟ್ ಸೂಚಿಸಿದೆ.
ಪಶ್ಚಿಮ ಬಂಗಾಳ ಶಾಲಾ ಸೇವಾ ಆಯೋಗ (ಡಬ್ಲ್ಯುಬಿಎಸ್ಎಸ್ಸಿ) ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಚಟರ್ಜಿ ಅವರನ್ನು ಶನಿವಾರ ಬಂಧಿಸಲಾಗಿತ್ತು.
#WATCH | West Bengal Minister and former Education Minister of the state, Partha Chatterjee, arrives at Bhubaneswar airport along with ED officials. To be taken to AIIMS, Bhubaneswar. pic.twitter.com/Rw7eBYkGsP