<p><strong>ನವದೆಹಲಿ:</strong> ರೈತರ ಹಿತದೃಷ್ಟಿಯಿಂದ ಹಲವಾರು ಕ್ರಮಗಳನ್ನು ಕೈಗೊಂಡಿದ್ದೇವೆ. ಮಂಡಿಗಳನ್ನು ಲಾಭದಾಯಕವಾಗಿಸಲು, ಇನ್ನೂ 1,000 ಮಂಡಿಗಳನ್ನು ಇ-ನಾಮ್ (ರಾಷ್ಟ್ರೀಯ ಕೃಷಿ ಮಾರುಕಟ್ಟೆ) ವ್ಯವಸ್ಥೆಗೆ ಜೋಡಿಸಲಾಗುವುದು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ತಿಳಿಸಿದ್ದಾರೆ.</p>.<p>ಕೇಂದ್ರ ಸರ್ಕಾರದ ಮೂರು ನೂತನ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ದೆಹಲಿ ಗಡಿ ಪ್ರದೇಶಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ನಡುವೆ'ಚೌರಿ ಚೌರಾ' ಘಟನೆಯ ಶತಮಾನೋತ್ಸವದ ಭಾಗವಾಗಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ನೀಡಿರುವ ಹೇಳಿಕೆಯು ಹೆಚ್ಚಿನ ಮಹತ್ವ ಗಿಟ್ಟಿಸಿದೆ.</p>.<p>ದೇಶದ ಪ್ರಗತಿಯ ಹಿಂದೆ ರೈತರ ಪಾತ್ರವಿದೆ. ಚೌರಿ ಚೌರಾ ಹೋರಾಟದಲ್ಲೂ ರೈತರು ಪ್ರಮುಖ ಪಾತ್ರ ವಹಿಸಿದ್ದಾರೆ. ಕಳೆದ ಆರು ವರ್ಷಗಳಲ್ಲಿ ರೈತರನ್ನು ಸ್ವಾವಲಂಬಿಯನ್ನಾಗಿಸಲು ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದರ ಫಲವಾಗಿ ಕೋವಿಡ್-19 ಸಾಂಕ್ರಾಮಿಕ ರೋಗದ ಸಮಯದಲ್ಲೂ ಕೃಷಿ ಕ್ಷೇತ್ರವು ಬೆಳವಣಿಗೆ ಸಾಧಿಸಿದೆಎಂದು ಹೇಳಿದರು.</p>.<p>ಇದನ್ನೂ ಓದಿ:<a href="https://www.prajavani.net/india-news/farmers-are-not-responsible-for-violence-on-republic-day-says-devegowda-802273.html" itemprop="url">ಗಣರಾಜ್ಯೋತ್ಸವದ ದಿನ ನಡೆದ ಗಲಭೆಗೆ ರೈತರು ಜವಾಬ್ದಾರರಲ್ಲ: ಎಚ್.ಡಿ. ದೇವೇಗೌಡ </a></p>.<p>ಚೌರಿ ಚೌರಾ ಹುತಾತ್ಮರ ಬಗ್ಗೆ ಹೆಚ್ಚು ಚರ್ಚಿಸಲ್ಪಡದಿರುವುದು ದುರದೃಷ್ಟಕರ. ಇತಿಹಾಸ ಪುಟಗಳಲ್ಲೂ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿಲ್ಲ. ಆದರೆ ಅವರ ರಕ್ತವು ಈ ಮಣ್ಣಿನಲ್ಲಿದ್ದು, ನಮಗೆ ಸದಾ ಸ್ಫೂರ್ತಿ ತುಂಬಲಿದೆ ಎಂದು ತಿಳಿಸಿದರು.</p>.<p>ಇದೇ ಸಂದರ್ಭದಲ್ಲಿ ದೇಶದ ಏಕತೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಎಲ್ಲರೂ ಪ್ರತಿಜ್ಞೆಯನ್ನು ತೆಗೆದುಕೊಳ್ಳಬೇಕೆಂದು ನಾಗರಿಕರಿಗೆ ಕರೆ ನೀಡಿದರು. ಈ ಒಂದು ಭಾವನೆಯೊಂದಿಗೆ ದೇಶದ ಪ್ರತಿಯೊಬ್ಬ ನಾಗರಿಕನೂ ಮುಂದುವರಿಯಬೇಕಾಗಿದೆ ಎಂದವರು ನುಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ರೈತರ ಹಿತದೃಷ್ಟಿಯಿಂದ ಹಲವಾರು ಕ್ರಮಗಳನ್ನು ಕೈಗೊಂಡಿದ್ದೇವೆ. ಮಂಡಿಗಳನ್ನು ಲಾಭದಾಯಕವಾಗಿಸಲು, ಇನ್ನೂ 1,000 ಮಂಡಿಗಳನ್ನು ಇ-ನಾಮ್ (ರಾಷ್ಟ್ರೀಯ ಕೃಷಿ ಮಾರುಕಟ್ಟೆ) ವ್ಯವಸ್ಥೆಗೆ ಜೋಡಿಸಲಾಗುವುದು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ತಿಳಿಸಿದ್ದಾರೆ.</p>.<p>ಕೇಂದ್ರ ಸರ್ಕಾರದ ಮೂರು ನೂತನ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ದೆಹಲಿ ಗಡಿ ಪ್ರದೇಶಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ನಡುವೆ'ಚೌರಿ ಚೌರಾ' ಘಟನೆಯ ಶತಮಾನೋತ್ಸವದ ಭಾಗವಾಗಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ನೀಡಿರುವ ಹೇಳಿಕೆಯು ಹೆಚ್ಚಿನ ಮಹತ್ವ ಗಿಟ್ಟಿಸಿದೆ.</p>.<p>ದೇಶದ ಪ್ರಗತಿಯ ಹಿಂದೆ ರೈತರ ಪಾತ್ರವಿದೆ. ಚೌರಿ ಚೌರಾ ಹೋರಾಟದಲ್ಲೂ ರೈತರು ಪ್ರಮುಖ ಪಾತ್ರ ವಹಿಸಿದ್ದಾರೆ. ಕಳೆದ ಆರು ವರ್ಷಗಳಲ್ಲಿ ರೈತರನ್ನು ಸ್ವಾವಲಂಬಿಯನ್ನಾಗಿಸಲು ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದರ ಫಲವಾಗಿ ಕೋವಿಡ್-19 ಸಾಂಕ್ರಾಮಿಕ ರೋಗದ ಸಮಯದಲ್ಲೂ ಕೃಷಿ ಕ್ಷೇತ್ರವು ಬೆಳವಣಿಗೆ ಸಾಧಿಸಿದೆಎಂದು ಹೇಳಿದರು.</p>.<p>ಇದನ್ನೂ ಓದಿ:<a href="https://www.prajavani.net/india-news/farmers-are-not-responsible-for-violence-on-republic-day-says-devegowda-802273.html" itemprop="url">ಗಣರಾಜ್ಯೋತ್ಸವದ ದಿನ ನಡೆದ ಗಲಭೆಗೆ ರೈತರು ಜವಾಬ್ದಾರರಲ್ಲ: ಎಚ್.ಡಿ. ದೇವೇಗೌಡ </a></p>.<p>ಚೌರಿ ಚೌರಾ ಹುತಾತ್ಮರ ಬಗ್ಗೆ ಹೆಚ್ಚು ಚರ್ಚಿಸಲ್ಪಡದಿರುವುದು ದುರದೃಷ್ಟಕರ. ಇತಿಹಾಸ ಪುಟಗಳಲ್ಲೂ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿಲ್ಲ. ಆದರೆ ಅವರ ರಕ್ತವು ಈ ಮಣ್ಣಿನಲ್ಲಿದ್ದು, ನಮಗೆ ಸದಾ ಸ್ಫೂರ್ತಿ ತುಂಬಲಿದೆ ಎಂದು ತಿಳಿಸಿದರು.</p>.<p>ಇದೇ ಸಂದರ್ಭದಲ್ಲಿ ದೇಶದ ಏಕತೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಎಲ್ಲರೂ ಪ್ರತಿಜ್ಞೆಯನ್ನು ತೆಗೆದುಕೊಳ್ಳಬೇಕೆಂದು ನಾಗರಿಕರಿಗೆ ಕರೆ ನೀಡಿದರು. ಈ ಒಂದು ಭಾವನೆಯೊಂದಿಗೆ ದೇಶದ ಪ್ರತಿಯೊಬ್ಬ ನಾಗರಿಕನೂ ಮುಂದುವರಿಯಬೇಕಾಗಿದೆ ಎಂದವರು ನುಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>