<p><strong>ನವದೆಹಲಿ:</strong> ‘ಎಲ್ಲರೂ ನೆರೆ ರಾಷ್ಟ್ರಗಳ ಸಾರ್ವಭೌಮತೆ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಪರಸ್ಪರ ಗೌರವಿಸಬೇಕು’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.</p>.<p>ಈ ಮೂಲಕ ಗಡಿ ತಕರಾರು ತೆಗೆದಿರುವ ಚೀನಾ ಹಾಗೂ ಜಮ್ಮು ಮತ್ತು ಕಾಶ್ಮೀರದ ಸಮಸ್ಯೆಯನ್ನು ಜಾಗತಿಕ ವೇದಿಕೆಯಲ್ಲಿ ಪ್ರಸ್ತಾಪಿಸಲು ಪ್ರಯತ್ನಿಸುತ್ತಿರುವ ಪಾಕಿಸ್ತಾನಕ್ಕೆ ಅವರು ಪರೋಕ್ಷವಾಗಿ ಕಠಿಣ ಸಂದೇಶ ರವಾನಿಸಿದ್ದಾರೆ.</p>.<p>ಶಾಂಘೈ ಸಹಕಾರ ಒಕ್ಕೂಟ (ಎಸ್ಸಿಒ) ಮಂಗಳವಾರ ಆಯೋಜಿಸಿದ್ದ ವರ್ಚುವಲ್ ಶೃಂಗ ಸಭೆಯಲ್ಲಿ ಅವರು ಮಾತನಾಡಿದರು.</p>.<p>ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಮತ್ತು ಪಾಕಿಸ್ತಾನದ ಪ್ರಧಾನ ಮಂತ್ರಿ ಇಮ್ರಾನ್ ಖಾನ್ ಅವರೂ ಪಾಲ್ಗೊಂಡಿದ್ದರು.</p>.<p>ನೆರೆಯ ರಾಷ್ಟ್ರಗಳೊಂದಿಗಿನ ಸಹಕಾರ ಬಲಪಡಿಸುವಲ್ಲಿ ಭಾರತದ ಪಾತ್ರದ ಕುರಿತು ಮಾತನಾಡಿದ ಮೋದಿ ‘ಸದಸ್ಯ ರಾಷ್ಟ್ರಗಳೊಂದಿಗಿನ ಸಂಪರ್ಕ ಮತ್ತು ಸಹಕಾರವನ್ನು ಬಲಪಡಿಸುವುದು ಅತಿ ಮುಖ್ಯ ಎಂಬುದನ್ನು ನಾವು ನಂಬಿದ್ದೇವೆ. ನೆರೆಯ ದೇಶಗಳ ಗಡಿ ಮತ್ತು ಸಾರ್ವಭೌಮತೆಯನ್ನೂ ಗೌರವಿಸುತ್ತೇವೆ’ ಎಂದರು.</p>.<p>‘ಎಸ್ಸಿಒನ ತತ್ವಗಳಿಗೆ ಬದ್ಧವಾಗಿ ಕೆಲಸ ಮಾಡಲು ನಾವು ಸದಾ ಸಿದ್ಧರಿದ್ದೇವೆ. ಆದರೆ ಕೆಲವರು ವಿನಾಕಾರಣ ದ್ವಿಪಕ್ಷೀಯ ಸಮಸ್ಯೆಗಳನ್ನು ಎಸ್ಸಿಒ ಕಾರ್ಯಸೂಚಿಯಲ್ಲಿ ಸೇರಿಸಲು ಪದೇ ಪದೇ ಪ್ರಯತ್ನಿಸುತ್ತಿರುವುದು ದುರದೃಷ್ಟಕರ. ಇದು ಎಸ್ಸಿಒ ನಿಯಮಾವಳಿಗೆ ವಿರುದ್ಧವಾದ ನಡೆಯಾಗಿದೆ’ ಎಂದು ಅವರು ಹೇಳಿದ್ದಾರೆ.</p>.<p>‘ಕೋವಿಡ್ ಲಸಿಕೆಯ ತಯಾರಿಕೆ ಮತ್ತು ಅಗತ್ಯವಿದ್ದವರಿಗೆ ಅದನ್ನು ವಿತರಿಸಲು ಭಾರತವು ಶಕ್ತಿಮೀರಿ ಪ್ರಯತ್ನಿಸಲಿದೆ. ಕೋವಿಡ್ ಬಿಕ್ಕಟ್ಟಿನ ನಡುವೆಯೂ ನಾವು150ಕ್ಕೂ ಅಧಿಕ ರಾಷ್ಟ್ರಗಳಿಗೆ ಅಗತ್ಯ ಔಷಧಿಗಳನ್ನು ಸರಬರಾಜು ಮಾಡಿದ್ದೇವೆ’ ಎಂದೂ ಮೋದಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಎಲ್ಲರೂ ನೆರೆ ರಾಷ್ಟ್ರಗಳ ಸಾರ್ವಭೌಮತೆ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಪರಸ್ಪರ ಗೌರವಿಸಬೇಕು’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.</p>.<p>ಈ ಮೂಲಕ ಗಡಿ ತಕರಾರು ತೆಗೆದಿರುವ ಚೀನಾ ಹಾಗೂ ಜಮ್ಮು ಮತ್ತು ಕಾಶ್ಮೀರದ ಸಮಸ್ಯೆಯನ್ನು ಜಾಗತಿಕ ವೇದಿಕೆಯಲ್ಲಿ ಪ್ರಸ್ತಾಪಿಸಲು ಪ್ರಯತ್ನಿಸುತ್ತಿರುವ ಪಾಕಿಸ್ತಾನಕ್ಕೆ ಅವರು ಪರೋಕ್ಷವಾಗಿ ಕಠಿಣ ಸಂದೇಶ ರವಾನಿಸಿದ್ದಾರೆ.</p>.<p>ಶಾಂಘೈ ಸಹಕಾರ ಒಕ್ಕೂಟ (ಎಸ್ಸಿಒ) ಮಂಗಳವಾರ ಆಯೋಜಿಸಿದ್ದ ವರ್ಚುವಲ್ ಶೃಂಗ ಸಭೆಯಲ್ಲಿ ಅವರು ಮಾತನಾಡಿದರು.</p>.<p>ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಮತ್ತು ಪಾಕಿಸ್ತಾನದ ಪ್ರಧಾನ ಮಂತ್ರಿ ಇಮ್ರಾನ್ ಖಾನ್ ಅವರೂ ಪಾಲ್ಗೊಂಡಿದ್ದರು.</p>.<p>ನೆರೆಯ ರಾಷ್ಟ್ರಗಳೊಂದಿಗಿನ ಸಹಕಾರ ಬಲಪಡಿಸುವಲ್ಲಿ ಭಾರತದ ಪಾತ್ರದ ಕುರಿತು ಮಾತನಾಡಿದ ಮೋದಿ ‘ಸದಸ್ಯ ರಾಷ್ಟ್ರಗಳೊಂದಿಗಿನ ಸಂಪರ್ಕ ಮತ್ತು ಸಹಕಾರವನ್ನು ಬಲಪಡಿಸುವುದು ಅತಿ ಮುಖ್ಯ ಎಂಬುದನ್ನು ನಾವು ನಂಬಿದ್ದೇವೆ. ನೆರೆಯ ದೇಶಗಳ ಗಡಿ ಮತ್ತು ಸಾರ್ವಭೌಮತೆಯನ್ನೂ ಗೌರವಿಸುತ್ತೇವೆ’ ಎಂದರು.</p>.<p>‘ಎಸ್ಸಿಒನ ತತ್ವಗಳಿಗೆ ಬದ್ಧವಾಗಿ ಕೆಲಸ ಮಾಡಲು ನಾವು ಸದಾ ಸಿದ್ಧರಿದ್ದೇವೆ. ಆದರೆ ಕೆಲವರು ವಿನಾಕಾರಣ ದ್ವಿಪಕ್ಷೀಯ ಸಮಸ್ಯೆಗಳನ್ನು ಎಸ್ಸಿಒ ಕಾರ್ಯಸೂಚಿಯಲ್ಲಿ ಸೇರಿಸಲು ಪದೇ ಪದೇ ಪ್ರಯತ್ನಿಸುತ್ತಿರುವುದು ದುರದೃಷ್ಟಕರ. ಇದು ಎಸ್ಸಿಒ ನಿಯಮಾವಳಿಗೆ ವಿರುದ್ಧವಾದ ನಡೆಯಾಗಿದೆ’ ಎಂದು ಅವರು ಹೇಳಿದ್ದಾರೆ.</p>.<p>‘ಕೋವಿಡ್ ಲಸಿಕೆಯ ತಯಾರಿಕೆ ಮತ್ತು ಅಗತ್ಯವಿದ್ದವರಿಗೆ ಅದನ್ನು ವಿತರಿಸಲು ಭಾರತವು ಶಕ್ತಿಮೀರಿ ಪ್ರಯತ್ನಿಸಲಿದೆ. ಕೋವಿಡ್ ಬಿಕ್ಕಟ್ಟಿನ ನಡುವೆಯೂ ನಾವು150ಕ್ಕೂ ಅಧಿಕ ರಾಷ್ಟ್ರಗಳಿಗೆ ಅಗತ್ಯ ಔಷಧಿಗಳನ್ನು ಸರಬರಾಜು ಮಾಡಿದ್ದೇವೆ’ ಎಂದೂ ಮೋದಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>