ಸಂಸತ್ತಿನ ಹೊರಗೆ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ರೈತರ ಅಭಿವೃದ್ಧಿಗಾಗಿ ಪ್ರಮುಖ ಹೆಜ್ಜೆಗಳನ್ನಿಡುವ ವಿಚಾರವಾಗಿ ಪ್ರಧಾನಿ ಮಾತನಾಡುತ್ತಾರೆ ಎಂದು ನಾವು ನಿರೀಕ್ಷಿಸಿದ್ದೆವು. 206 ರೈತರು ಜೀವ ಕಳೆದುಕೊಂಡಿದ್ದರೂ ಪ್ರಧಾನಿ ಆ ವಿಚಾರವಾಗಿ ಏನನ್ನೂ ಹೇಳಲು ಸಿದ್ಧರಿಲ್ಲ. ಬದಲಿಗೆ ಕಾಯ್ದೆಗಳ ಲಾಭಗಳ ಬಗ್ಗೆ ಮಾತನಾಡಿದರು. ಎಲ್ಲರಿಗೂ ಲಾಭದಾಯಕವಾಗುವುದಿಲ್ಲ ಎಂದಾದರೆ ಅಂಥ ಕಾನೂನನ್ನು ತರುವ ಅಗತ್ಯವಾದರೂ ಏನು? 18 ತಿಂಗಳ ಕಾಲ ಕಾಯ್ದೆಗಳನ್ನು ಅಮಾನತಿನಲ್ಲಿಡಲು ಸರ್ಕಾರ ಸಿದ್ಧವಿರುವುದಾದರೆ, ಸಂಪೂರ್ಣವಾಗಿ ರದ್ದು ಯಾಕೆ ಮಾಡಬಾರದು ಎಂಬುದು ನಮ್ಮ ಪ್ರಶ್ನೆ’ ಎಂದರು.