ಕಳೆದ ಮೂರು ವರ್ಷಗಳಲ್ಲಿ 9,600 ತೀವ್ರವಾದಿಗಳು ಶಸ್ತ್ರಾಸ್ತ್ರ ತ್ಯಜಿಸಿ ಮುಖ್ಯವಾಹಿನಿಗೆ ಮರಳಿದ್ದಾರೆ. ನಮ್ಮ ಸರ್ಕಾರವು ಈಶಾನ್ಯದಲ್ಲಿ ವಿವಾದಗಳನ್ನು ಕೊನೆಗಾಣಿಸಿ ಶಾಂತಿ ನೆಲೆಸುವಂತೆ ಮಾಡುವ ಉದ್ದೇಶ ಹೊಂದಿದೆ. ಬಿಜೆಪಿ ಸರ್ಕಾರವು ಈಶಾನ್ಯ ರಾಜ್ಯಗಳಲ್ಲಿ ಭಯೋತ್ಪಾದನೆ ಪ್ರಮಾಣವನ್ನು ಶೇ 89ರಷ್ಟು ಕಡಿಮೆ ಮಾಡಿದೆ ಎಂದು ಅಮಿತ್ ಶಾ ಹೇಳಿರುವುದಾಗಿ ‘ಎಎನ್ಐ’ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ.